ಬ್ರೇಕಿಂಗ್ ನ್ಯೂಸ್
19-08-20 11:26 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೊರೊನಾ ಅನ್ ಲಾಕ್ ಬಳಿಕ ಮದ್ಯದಂಗಡಿಗಳು ತೆರೆದುಕೊಂಡಿವೆ. ಇದೇ ವೇಳೆ, ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು ಅಬಕಾರಿ ಇಲಾಖೆ ಅವಕಾಶ ನೀಡಿದೆ. ಆದರೆ, ಮಂಗಳೂರಿನ ಕೆಲವೆಡೆ ಈ ವಿನಾಯ್ತಿ ನೆಪದಲ್ಲಿಯೇ ಕಾರುಬಾರು ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಮಂಗಳೂರು ನಗರ ಪ್ರದೇಶದಲ್ಲಿ ಪೊಲೀಸರಿಗೆ ಮಾಮೂಲು ಕೊಟ್ಟು ಬಾರ್ ಗಳಲ್ಲಿಯೇ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಸಂಜೆಯಾಗುತ್ತಿದ್ದಂತೆ ಎಂದಿನ ರೀತಿಯಲ್ಲಿಯೇ ಮದ್ಯಪ್ರಿಯರು ಬಾರ್ ಗಳಲ್ಲೇ ಕುಳಿತು ಕುಡಿಯಲು ಆರಂಭಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆ, ಕೆಎಸ್ಸಾರ್ಟಿಸಿ, ಕಾಪಿಕಾಡ್, ಹಂಪನಕಟ್ಟೆ ಬಳಿಯ ಬಾರ್ ಗಳಲ್ಲಿ ರಾತ್ರಿ ವರೆಗೂ ಜನರು ಕುಳಿತು ಕುಡಿಯುತ್ತಿದ್ದಾರೆ. ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು 9 ಗಂಟೆ ವರೆಗೆ ಮಾತ್ರ ಅವಕಾಶ ಇದ್ದರೂ, ರಾತ್ರಿ ಹನ್ನೊಂದು ಆದರೂ ಬಾಗಿಲು ಹಾಕದೆ ವ್ಯಾಪಾರ ನಡೆಸುವುದನ್ನು ಗಮನಿಸಿದ ಸಾರ್ವಜನಿಕರು ಮಾಧ್ಯಮದ ಗಮನಕ್ಕೆ ತಂದಿದ್ದಾರೆ. ಕೆಲವು ಕಡೆ ಬಾರ್ ಗಳಲ್ಲಿ ಇಸ್ಪೀಟ್ ಆಟಕ್ಕೂ ವೇದಿಕೆ ಕಲ್ಪಿಸಲಾಗಿದೆ. ಬಾರ್ ಒಳಗಿನ ಟೇಬಲ್ ಗಳಲ್ಲಿ ಇಸ್ಪೀಟ್ ಎಲೆಗಳು ಸದ್ದು ಮಾಡುತ್ತಿವೆಯಂತೆ. ಪಬ್, ಇಸ್ಪೀಟ್ ಕ್ಲಬ್ ಬಂದ್ ಇರುವ ಹಿನ್ನೆಲೆಯಲ್ಲಿ ಬಾರ್ ಒಳಗಡೆಯೇ ದಲ್ಲಾಳಿಗಳು ಸೇರಿ ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಇದೆಲ್ಲವೂ ಸ್ಥಳೀಯ ಪೊಲೀಸರ ಗಮನಕ್ಕೆ ಬರದ ವಿಷಯವೇನಲ್ಲ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am