ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.
ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.
ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm