ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.


ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.



ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.



ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm