ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.


ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.

ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm