ಬ್ರೇಕಿಂಗ್ ನ್ಯೂಸ್
06-03-21 11:24 pm Mangaluru correspondent ಕರಾವಳಿ
ಮಂಗಳೂರು, ಮಾ.6: ಕಂಬಳದಲ್ಲಿ ಹಿಂಸೆ ಆಗತ್ತೆ ಎಂದು ಕೋರ್ಟಿಗೆ ಹೋಗಿದ್ದನ್ನು ಕೇಳಿದ್ದೆ. ಆದರೆ, ನನಗೆ ಕಂಬಳದಲ್ಲಿ ಹಿಂಸೆ ಕಂಡಿಲ್ಲ. ಹಿಂಸೆ ಆಗ್ತಾ ಇರುವುದು ಕಾಣ್ತಾ ಇಲ್ಲ ಎಂದು ಅವಧೂತ, ವಿನಯ ಗುರೂಜಿ ಹೇಳಿದ್ದಾರೆ.

ನಗರದ ಕುಳೂರಿನಲ್ಲಿ ನಡೆದ ರಾಮ ಲಕ್ಷ್ಮಣ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ವಿನಯ ಗುರೂಜಿ ಮಾತನಾಡಿದರು.
ಕಂಬಳ ನಮ್ಮ ಜನಪದ ಕ್ರೀಡೆ. ನಮ್ಮ ಹೆಮ್ಮೆ. ಆದರೆ, ಕಂಬಳ ನಮ್ಮ ಕರಾವಳಿ ಅಥವಾ ಕರ್ನಾಟಕ ರಾಜ್ಯಕ್ಕೆ ಸೀಮಿತ ಆಗಬಾರದು. ಕಂಬಳ, ಯಕ್ಷಗಾನ ಯಾಕೆ ಇಲ್ಲಿಗೆ ಸೀಮಿತ ಆಗಬೇಕು. ಯಕ್ಷಗಾನ ಹೊರ ದೇಶಕ್ಕೆ ಹೋಗಿದೆ. ಕಂಬಳವೂ ಹೋಗಬೇಕು. ವಿದೇಶದಲ್ಲೂ ಮಿಂಚಬೇಕು, ನಮ್ಮ ಕಂಬಳದಲ್ಲಿ ಉದ್ಯೋಗ ಕಂಡವರು ವಿದೇಶಕ್ಕೆ ಹೋಗಿ ತಮ್ಮ ಸಾಧನೆ ಮೆರೆಯಬೇಕು. ರಾಜಕಾರಣಿಗಳು, ಉದ್ಯಮ ಕ್ಷೇತ್ರದ ಸಾಧಕರು ಮನಸ್ಸು ಮಾಡಿದರೆ ಇದು ಕಷ್ಟದ ಕೆಲಸ ಅಲ್ಲ ಎಂದು ಹೇಳಿದರು.



ಸಮಾರಂಭದಲ್ಲಿ ಮಾತನಾಡಿದ ಉದ್ಯಮಿ, ಕಂಬಳ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ , ಸದ್ಯದಲ್ಲೇ ಗೋಲ್ಡ್ ಫಿಂಚ್ ಮೈದಾನ ಒಂದು ಸಿಟಿಯಾಗಿ ಬೆಳೆಯಲಿದೆ. ಇದರ ಕಾಮಗಾರಿ ನಡೆಯುತ್ತಿದ್ದು ಸಿಟಿಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕೂಡ ಬರಲಿದೆ. ಅದರಲ್ಲಿ ಜೋಡುಕರೆ ಕಂಬಳದ ಕರೆಯನ್ನೂ ಮಾಡುವಂತೆ ಆರ್ಕಿಟೆಕ್ಚರ್ ಬಳಿ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸಮಾರಂಭದಲ್ಲಿ ಮಧ್ಯಪ್ರದೇಶದ ಸ್ವಾಮಿ ಕಾಳಿಚರಣ್ ಸ್ವಾಮೀಜಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಂಬಳ ಸಮಿತಿ ಅಧ್ಯಕ್ಷ ಬೃಜೇಶ್ ಚೌಟ ಗಣ್ಯರನ್ನು ಸ್ವಾಗತಿಸಿದರು.


ಮಂಗಳೂರು ನಗರದ ಜನರಿಗೆ ಕಂಬಳದ ಅದ್ದೂರಿತನ, ಜನಪದ ಕ್ರೀಡೆಯ ಔನ್ನತ್ಯವನ್ನು ತೋರಿಸಬೇಕೆನ್ನುವ ಚಿಂತನೆಯಲ್ಲಿ ಆರಂಭಗೊಂಡ ಮಂಗಳೂರು ಕಂಬಳ ಈ ಬಾರಿ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸಲವೂ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು ಕಂಬಳವನ್ನು ಸವಿದಿದ್ದಾರೆ. ಕಂಬಳದಲ್ಲಿ 157 ಜೊತೆ ಕೋಣಗಳು ಭಾಗವಹಿಸಿದ್ದು ನಾಳೆ ಮಧ್ಯಾಹ್ನ ವರೆಗೂ ಕಂಬಳ ನಡೆಯಲಿದೆ.
The fourth edition of Rama-Lakshmana Jodukere Kambala was held on 6 March at the Goldfinch City, Bangra Kulur in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm