ಬ್ರೇಕಿಂಗ್ ನ್ಯೂಸ್
 
            
                        06-03-21 11:24 pm Mangaluru correspondent ಕರಾವಳಿ
 
            ಮಂಗಳೂರು, ಮಾ.6: ಕಂಬಳದಲ್ಲಿ ಹಿಂಸೆ ಆಗತ್ತೆ ಎಂದು ಕೋರ್ಟಿಗೆ ಹೋಗಿದ್ದನ್ನು ಕೇಳಿದ್ದೆ. ಆದರೆ, ನನಗೆ ಕಂಬಳದಲ್ಲಿ ಹಿಂಸೆ ಕಂಡಿಲ್ಲ. ಹಿಂಸೆ ಆಗ್ತಾ ಇರುವುದು ಕಾಣ್ತಾ ಇಲ್ಲ ಎಂದು ಅವಧೂತ, ವಿನಯ ಗುರೂಜಿ ಹೇಳಿದ್ದಾರೆ.

ನಗರದ ಕುಳೂರಿನಲ್ಲಿ ನಡೆದ ರಾಮ ಲಕ್ಷ್ಮಣ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ವಿನಯ ಗುರೂಜಿ ಮಾತನಾಡಿದರು.
ಕಂಬಳ ನಮ್ಮ ಜನಪದ ಕ್ರೀಡೆ. ನಮ್ಮ ಹೆಮ್ಮೆ. ಆದರೆ, ಕಂಬಳ ನಮ್ಮ ಕರಾವಳಿ ಅಥವಾ ಕರ್ನಾಟಕ ರಾಜ್ಯಕ್ಕೆ ಸೀಮಿತ ಆಗಬಾರದು. ಕಂಬಳ, ಯಕ್ಷಗಾನ ಯಾಕೆ ಇಲ್ಲಿಗೆ ಸೀಮಿತ ಆಗಬೇಕು. ಯಕ್ಷಗಾನ ಹೊರ ದೇಶಕ್ಕೆ ಹೋಗಿದೆ. ಕಂಬಳವೂ ಹೋಗಬೇಕು. ವಿದೇಶದಲ್ಲೂ ಮಿಂಚಬೇಕು, ನಮ್ಮ ಕಂಬಳದಲ್ಲಿ ಉದ್ಯೋಗ ಕಂಡವರು ವಿದೇಶಕ್ಕೆ ಹೋಗಿ ತಮ್ಮ ಸಾಧನೆ ಮೆರೆಯಬೇಕು. ರಾಜಕಾರಣಿಗಳು, ಉದ್ಯಮ ಕ್ಷೇತ್ರದ ಸಾಧಕರು ಮನಸ್ಸು ಮಾಡಿದರೆ ಇದು ಕಷ್ಟದ ಕೆಲಸ ಅಲ್ಲ ಎಂದು ಹೇಳಿದರು.



ಸಮಾರಂಭದಲ್ಲಿ ಮಾತನಾಡಿದ ಉದ್ಯಮಿ, ಕಂಬಳ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ , ಸದ್ಯದಲ್ಲೇ ಗೋಲ್ಡ್ ಫಿಂಚ್ ಮೈದಾನ ಒಂದು ಸಿಟಿಯಾಗಿ ಬೆಳೆಯಲಿದೆ. ಇದರ ಕಾಮಗಾರಿ ನಡೆಯುತ್ತಿದ್ದು ಸಿಟಿಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕೂಡ ಬರಲಿದೆ. ಅದರಲ್ಲಿ ಜೋಡುಕರೆ ಕಂಬಳದ ಕರೆಯನ್ನೂ ಮಾಡುವಂತೆ ಆರ್ಕಿಟೆಕ್ಚರ್ ಬಳಿ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸಮಾರಂಭದಲ್ಲಿ ಮಧ್ಯಪ್ರದೇಶದ ಸ್ವಾಮಿ ಕಾಳಿಚರಣ್ ಸ್ವಾಮೀಜಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಂಬಳ ಸಮಿತಿ ಅಧ್ಯಕ್ಷ ಬೃಜೇಶ್ ಚೌಟ ಗಣ್ಯರನ್ನು ಸ್ವಾಗತಿಸಿದರು.


ಮಂಗಳೂರು ನಗರದ ಜನರಿಗೆ ಕಂಬಳದ ಅದ್ದೂರಿತನ, ಜನಪದ ಕ್ರೀಡೆಯ ಔನ್ನತ್ಯವನ್ನು ತೋರಿಸಬೇಕೆನ್ನುವ ಚಿಂತನೆಯಲ್ಲಿ ಆರಂಭಗೊಂಡ ಮಂಗಳೂರು ಕಂಬಳ ಈ ಬಾರಿ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸಲವೂ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು ಕಂಬಳವನ್ನು ಸವಿದಿದ್ದಾರೆ. ಕಂಬಳದಲ್ಲಿ 157 ಜೊತೆ ಕೋಣಗಳು ಭಾಗವಹಿಸಿದ್ದು ನಾಳೆ ಮಧ್ಯಾಹ್ನ ವರೆಗೂ ಕಂಬಳ ನಡೆಯಲಿದೆ.
 
            
            
            The fourth edition of Rama-Lakshmana Jodukere Kambala was held on 6 March at the Goldfinch City, Bangra Kulur in Mangalore.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm