ಬ್ರೇಕಿಂಗ್ ನ್ಯೂಸ್
06-03-21 11:24 pm Mangaluru correspondent ಕರಾವಳಿ
ಮಂಗಳೂರು, ಮಾ.6: ಕಂಬಳದಲ್ಲಿ ಹಿಂಸೆ ಆಗತ್ತೆ ಎಂದು ಕೋರ್ಟಿಗೆ ಹೋಗಿದ್ದನ್ನು ಕೇಳಿದ್ದೆ. ಆದರೆ, ನನಗೆ ಕಂಬಳದಲ್ಲಿ ಹಿಂಸೆ ಕಂಡಿಲ್ಲ. ಹಿಂಸೆ ಆಗ್ತಾ ಇರುವುದು ಕಾಣ್ತಾ ಇಲ್ಲ ಎಂದು ಅವಧೂತ, ವಿನಯ ಗುರೂಜಿ ಹೇಳಿದ್ದಾರೆ.
ನಗರದ ಕುಳೂರಿನಲ್ಲಿ ನಡೆದ ರಾಮ ಲಕ್ಷ್ಮಣ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ವಿನಯ ಗುರೂಜಿ ಮಾತನಾಡಿದರು.
ಕಂಬಳ ನಮ್ಮ ಜನಪದ ಕ್ರೀಡೆ. ನಮ್ಮ ಹೆಮ್ಮೆ. ಆದರೆ, ಕಂಬಳ ನಮ್ಮ ಕರಾವಳಿ ಅಥವಾ ಕರ್ನಾಟಕ ರಾಜ್ಯಕ್ಕೆ ಸೀಮಿತ ಆಗಬಾರದು. ಕಂಬಳ, ಯಕ್ಷಗಾನ ಯಾಕೆ ಇಲ್ಲಿಗೆ ಸೀಮಿತ ಆಗಬೇಕು. ಯಕ್ಷಗಾನ ಹೊರ ದೇಶಕ್ಕೆ ಹೋಗಿದೆ. ಕಂಬಳವೂ ಹೋಗಬೇಕು. ವಿದೇಶದಲ್ಲೂ ಮಿಂಚಬೇಕು, ನಮ್ಮ ಕಂಬಳದಲ್ಲಿ ಉದ್ಯೋಗ ಕಂಡವರು ವಿದೇಶಕ್ಕೆ ಹೋಗಿ ತಮ್ಮ ಸಾಧನೆ ಮೆರೆಯಬೇಕು. ರಾಜಕಾರಣಿಗಳು, ಉದ್ಯಮ ಕ್ಷೇತ್ರದ ಸಾಧಕರು ಮನಸ್ಸು ಮಾಡಿದರೆ ಇದು ಕಷ್ಟದ ಕೆಲಸ ಅಲ್ಲ ಎಂದು ಹೇಳಿದರು.
ಸಮಾರಂಭದಲ್ಲಿ ಮಾತನಾಡಿದ ಉದ್ಯಮಿ, ಕಂಬಳ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ , ಸದ್ಯದಲ್ಲೇ ಗೋಲ್ಡ್ ಫಿಂಚ್ ಮೈದಾನ ಒಂದು ಸಿಟಿಯಾಗಿ ಬೆಳೆಯಲಿದೆ. ಇದರ ಕಾಮಗಾರಿ ನಡೆಯುತ್ತಿದ್ದು ಸಿಟಿಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕೂಡ ಬರಲಿದೆ. ಅದರಲ್ಲಿ ಜೋಡುಕರೆ ಕಂಬಳದ ಕರೆಯನ್ನೂ ಮಾಡುವಂತೆ ಆರ್ಕಿಟೆಕ್ಚರ್ ಬಳಿ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸಮಾರಂಭದಲ್ಲಿ ಮಧ್ಯಪ್ರದೇಶದ ಸ್ವಾಮಿ ಕಾಳಿಚರಣ್ ಸ್ವಾಮೀಜಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಂಬಳ ಸಮಿತಿ ಅಧ್ಯಕ್ಷ ಬೃಜೇಶ್ ಚೌಟ ಗಣ್ಯರನ್ನು ಸ್ವಾಗತಿಸಿದರು.
ಮಂಗಳೂರು ನಗರದ ಜನರಿಗೆ ಕಂಬಳದ ಅದ್ದೂರಿತನ, ಜನಪದ ಕ್ರೀಡೆಯ ಔನ್ನತ್ಯವನ್ನು ತೋರಿಸಬೇಕೆನ್ನುವ ಚಿಂತನೆಯಲ್ಲಿ ಆರಂಭಗೊಂಡ ಮಂಗಳೂರು ಕಂಬಳ ಈ ಬಾರಿ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸಲವೂ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು ಕಂಬಳವನ್ನು ಸವಿದಿದ್ದಾರೆ. ಕಂಬಳದಲ್ಲಿ 157 ಜೊತೆ ಕೋಣಗಳು ಭಾಗವಹಿಸಿದ್ದು ನಾಳೆ ಮಧ್ಯಾಹ್ನ ವರೆಗೂ ಕಂಬಳ ನಡೆಯಲಿದೆ.
The fourth edition of Rama-Lakshmana Jodukere Kambala was held on 6 March at the Goldfinch City, Bangra Kulur in Mangalore.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm