ಬ್ರೇಕಿಂಗ್ ನ್ಯೂಸ್
07-03-21 12:21 pm Mangalore Correspondent ಕರಾವಳಿ
ಮಂಗಳೂರು, ಮಾ.7; ದೊಡ್ಡಪ್ಪನ ಮಗನಿಗೆ ಬುದ್ಧಿವಾದ ಹೇಳಿದ್ದಕ್ಕೆ ಅಣ್ಣ ತಮ್ಮನನ್ನೇ ಕೊಲೆಗೈದಿದ್ದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬಂಟ್ವಾಳ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ನಿವಾಸಿ ರಾಜೇಶ್(27) ಶಿಕ್ಷೆಗೊಳಗಾದ ಯುವಕ. ಈತ ತನ್ನ ದೊಡ್ಡಪ್ಪನ ಮಗ ರಂಜಿತ್(27) ಎಂಬಾತನನ್ನು 2017ರ ಮೇ 17 ರಂದು ರಾತ್ರಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ್ದಾನೆ. ಇವರು ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿಯ ನಿವಾಸಿಗಳಾಗಿದ್ದು ಅಣ್ಣ - ತಮ್ಮಂದಿರು. ಆರೋಪಿ ರಾಜನಿಗೆ ವಿಪರೀತ ಮದ್ಯಸೇವನೆ ಚಟವಿತ್ತು. ಆತನಿಗೆ ಹೆತ್ತವರು ಬುದ್ಧಿ ಮಾತು ಹೇಳಿದರೂ ಕೇಳುತ್ತಿರಲಿಲ್ಲ. ಇದರಿಂದ ನೊಂದಿದ್ದ ಆತನ ಹೆತ್ತವರು ರಂಜಿತ್ ಮತ್ತು ಆತನ ತಂದೆ ತಾಯಿಗೆ ಬುದ್ಧಿ ಹೇಳುವಂತೆ ಸೂಚಿಸಿದ್ದರು. ಅದರಂತೆ ರಂಜಿತ್ ಹಲವು ಬಾರಿ ರಾಜೇಶನಿಗೆ ಬುದ್ದಿಮಾತು ಹೇಳಿದ್ದು ರಂಜಿತ್ ಮೇಲೆ ರಾಜೇಶನಿಗೆ ವೈಮನಸ್ಸು ಉಂಟಾಗಿತ್ತು.
ಮೇ 17ರಂದು ಬಿ.ಸಿ ರೋಡ್ ನ ಬಾರ್ ನಲ್ಲಿ ರಾಜೇಶ್ ಆತನ ಗೆಳೆಯರೊಂದಿಗೆ ಮದ್ಯ ಸೇವಿಸುತ್ತಿದ್ದು ರಂಜಿತ್ ಬುದ್ಧಿಮಾತು ಹೇಳಿದ್ದಲ್ಲದೆ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಆತನನ್ನು ತಡೆದು ಕೈಯಿಂದ ಹೊಡೆದಿದ್ದ. ಇದರಿಂದ ರಾಜೇಶ್ ಮತ್ತಷ್ಟು ಮುನಿಸಿಕೊಂಡಿದ್ದು ಅದೇ ದಿನ ರಾತ್ರಿ ಹತ್ತು ಗಂಟೆ ವೇಳೆಗೆ ರಂಜಿತ್ ಮನೆಗೆ ತೆರಳಿದ್ದ. ಕೈಯಲ್ಲಿ ಚೂರಿ ಹಿಡಿದುಕೊಂಡು ಹೋಗಿದ್ದ ರಾಜೇಶ್, ಮನೆಯವರನ್ನು ಕರೆದಿದ್ದಾನೆ. ಗಣೇಶ್ ಪೂಜಾರಿ, ಅವರ ಪತ್ನಿ ಲಲಿತಾ ಮತ್ತು ಪುತ್ರ ರಂಜಿತ್ ಹೊರಗೆ ಬಂದಿದ್ದು ಈ ವೇಳೆ ರಾಜೇಶ್ ಚೂರಿಯಿಂದ ರಂಜಿತ್ ನ ಕುತ್ತಿಗೆ ಭಾಗಕ್ಕೆ ತಿವಿದಿದ್ದು ತಡೆಯಲು ಮುಂದಾದ ಗಣೇಶ್ ಪೂಜಾರಿ ಕೈಗೂ ಚೂರಿಯಿಂದ ಗಾಯವಾಗಿತ್ತು. ತೀವ್ರ ಗಾಯಗೊಂಡ ರಂಜಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು ಆತ ಮೃತಪಟ್ಟಿದ್ದ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಗ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿದ್ದ ನಾಗೇಶ್ ಡಿ.ಎಲ್ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
The Mangalore court has sentenced life imprisonment to an Elderly brother for killing his younger brother in Bantwal, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm