ಬ್ರೇಕಿಂಗ್ ನ್ಯೂಸ್
 
            
                        07-03-21 12:21 pm Mangalore Correspondent ಕರಾವಳಿ
 
            ಮಂಗಳೂರು, ಮಾ.7; ದೊಡ್ಡಪ್ಪನ ಮಗನಿಗೆ ಬುದ್ಧಿವಾದ ಹೇಳಿದ್ದಕ್ಕೆ ಅಣ್ಣ ತಮ್ಮನನ್ನೇ ಕೊಲೆಗೈದಿದ್ದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬಂಟ್ವಾಳ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ನಿವಾಸಿ ರಾಜೇಶ್(27) ಶಿಕ್ಷೆಗೊಳಗಾದ ಯುವಕ. ಈತ ತನ್ನ ದೊಡ್ಡಪ್ಪನ ಮಗ ರಂಜಿತ್(27) ಎಂಬಾತನನ್ನು 2017ರ ಮೇ 17 ರಂದು ರಾತ್ರಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ್ದಾನೆ. ಇವರು ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿಯ ನಿವಾಸಿಗಳಾಗಿದ್ದು ಅಣ್ಣ - ತಮ್ಮಂದಿರು. ಆರೋಪಿ ರಾಜನಿಗೆ ವಿಪರೀತ ಮದ್ಯಸೇವನೆ ಚಟವಿತ್ತು. ಆತನಿಗೆ ಹೆತ್ತವರು ಬುದ್ಧಿ ಮಾತು ಹೇಳಿದರೂ ಕೇಳುತ್ತಿರಲಿಲ್ಲ. ಇದರಿಂದ ನೊಂದಿದ್ದ ಆತನ ಹೆತ್ತವರು ರಂಜಿತ್ ಮತ್ತು ಆತನ ತಂದೆ ತಾಯಿಗೆ ಬುದ್ಧಿ ಹೇಳುವಂತೆ ಸೂಚಿಸಿದ್ದರು. ಅದರಂತೆ ರಂಜಿತ್ ಹಲವು ಬಾರಿ ರಾಜೇಶನಿಗೆ ಬುದ್ದಿಮಾತು ಹೇಳಿದ್ದು ರಂಜಿತ್ ಮೇಲೆ ರಾಜೇಶನಿಗೆ ವೈಮನಸ್ಸು ಉಂಟಾಗಿತ್ತು.
ಮೇ 17ರಂದು ಬಿ.ಸಿ ರೋಡ್ ನ ಬಾರ್ ನಲ್ಲಿ ರಾಜೇಶ್ ಆತನ ಗೆಳೆಯರೊಂದಿಗೆ ಮದ್ಯ ಸೇವಿಸುತ್ತಿದ್ದು ರಂಜಿತ್ ಬುದ್ಧಿಮಾತು ಹೇಳಿದ್ದಲ್ಲದೆ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಆತನನ್ನು ತಡೆದು ಕೈಯಿಂದ ಹೊಡೆದಿದ್ದ. ಇದರಿಂದ ರಾಜೇಶ್ ಮತ್ತಷ್ಟು ಮುನಿಸಿಕೊಂಡಿದ್ದು ಅದೇ ದಿನ ರಾತ್ರಿ ಹತ್ತು ಗಂಟೆ ವೇಳೆಗೆ ರಂಜಿತ್ ಮನೆಗೆ ತೆರಳಿದ್ದ. ಕೈಯಲ್ಲಿ ಚೂರಿ ಹಿಡಿದುಕೊಂಡು ಹೋಗಿದ್ದ ರಾಜೇಶ್, ಮನೆಯವರನ್ನು ಕರೆದಿದ್ದಾನೆ. ಗಣೇಶ್ ಪೂಜಾರಿ, ಅವರ ಪತ್ನಿ ಲಲಿತಾ ಮತ್ತು ಪುತ್ರ ರಂಜಿತ್ ಹೊರಗೆ ಬಂದಿದ್ದು ಈ ವೇಳೆ ರಾಜೇಶ್ ಚೂರಿಯಿಂದ ರಂಜಿತ್ ನ ಕುತ್ತಿಗೆ ಭಾಗಕ್ಕೆ ತಿವಿದಿದ್ದು ತಡೆಯಲು ಮುಂದಾದ ಗಣೇಶ್ ಪೂಜಾರಿ ಕೈಗೂ ಚೂರಿಯಿಂದ ಗಾಯವಾಗಿತ್ತು. ತೀವ್ರ ಗಾಯಗೊಂಡ ರಂಜಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು ಆತ ಮೃತಪಟ್ಟಿದ್ದ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಗ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿದ್ದ ನಾಗೇಶ್ ಡಿ.ಎಲ್ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
 
            
            
            The Mangalore court has sentenced life imprisonment to an Elderly brother for killing his younger brother in Bantwal, Mangalore.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm