ಬ್ರೇಕಿಂಗ್ ನ್ಯೂಸ್
19-08-20 08:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರೋ ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಮತ್ತು ಸುತ್ತಲ ಆವರಣದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ.
ಸಿಐಎಸ್ ಎಫ್ ಸಿಬ್ಬಂದಿ ಸೇರಿ ಸ್ಥಳೀಯ ಪೊಲೀಸರು ಸಂಪೂರ್ಣ ಏರ್ಪೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನದ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಏರ್ಪೋರ್ಟ್ ಸಿಬಂದಿಯನ್ನು ಪೇಚಿಗೀಡು ಮಾಡಿದ್ದಾರೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಬಜಪೆ ಪೊಲೀಸ್ ಠಾಣೆಗೆ ಏರ್ಪೋರ್ಟ್ ಅಧಿಕಾರಿಗಳು ದೂರು ನೀಡಿದ್ದಾರೆ. ತಪಾಸಣೆ ಬಳಿಕ ಯಾವುದೇ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಯಾರೋ ಕಿಡಿಗೇಡಿ ಹುಸಿ ಬೆದರಿಕೆ ಹಾಕಿದ್ದಾರೆಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಆರು ತಿಂಗಳ ಹಿಂದೆ ಆದಿತ್ಯ ರಾವ್ ಎಂಬಾತ ಇದೇ ರೀತಿ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಆವರಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದಾಗಲೇ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಶರಣಾಗಿದ್ದ. ಆನಂತ್ರ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm