ಬ್ರೇಕಿಂಗ್ ನ್ಯೂಸ್
10-03-21 03:47 pm Mangalore Correspondent ಕರಾವಳಿ
ಉಳ್ಳಾಲ, ಮಾ. 10: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ಅಸಹಜ ರೀತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಯಾರೋ ಕೊಲೆಗೈದಿರುವ ಪ್ರಬಲ ಶಂಕೆ ವ್ಯಕ್ತವಾಗಿದೆ.

ಕುಂಪಲ ಆಶ್ರಯ ಕಾಲನಿಯ ಮನೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯ ಗಾಂಜಾ ವ್ಯಸನಿಗಳು ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಕುಂಪಲ ಆಶ್ರಯ ಕಾಲನಿ ನಿವಾಸಿ ಪ್ರೇಕ್ಷಾ (19) ಮೃತ ದುರ್ದೈವಿ. ಎಚ್ ಪಿ ಗ್ಯಾಸ್ ಏಜನ್ಸಿಯಲ್ಲಿ ಕಾರ್ಮಿಕರಾಗಿರುವ ಚಿತ್ತಪ್ರಸಾದ್ ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ವನಿತಾ ದಂಪತಿಯ ಕಿರಿಯ ಪುತ್ರಿ ಪ್ರೇಕ್ಷಾ ಇಂದು ಮಧ್ಯಾಹ್ನ ಮನೆಯ ರೂಮಿನಲ್ಲಿ ಚೂಡಿದಾರದ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೈದಿರುವ ರೀತಿ ಕಂಡುಬಂದಿದೆ. ಆದರೆ, ಬೆಡ್ ಮೇಲೆ ನಿಂತ ಭಂಗಿಯಲ್ಲಿ ಶವ ಇದ್ದು ಕೊಲೆಗೈದು ನೇತು ಹಾಕಿರುವ ಶಂಕೆ ವ್ಯಕ್ತವಾಗಿದೆ.

ತಂದೆ ಚಿತ್ತ ಪ್ರಸಾದ್ ಮತ್ತು ತಾಯಿ ಕೆಲಸಕ್ಕೆ ತೆರಳಿದ್ದು ಪ್ರೇಕ್ಷಾಳ ಅಕ್ಕ ಪ್ರತೀಕ್ಷಾ ಕಾಲೇಜಿಗೆ ತೆರಳಿದ್ದಳು. ಹೀಗಾಗಿ ತಂಗಿ ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ಸ್ಥಳೀಯ ಮಹಿಳೆಯೋರ್ವಳಿಗೆ ಘಟನೆ ಗೊತ್ತಾಗಿದ್ದು ಪ್ರೇಕ್ಷಾ ಬಗ್ಗೆ ಆಕೆಯ ತಾಯಿಗೆ ಮಾಹಿತಿ ನೀಡಿದ್ದಾರೆ. ತಾಯಿ ಮಧ್ಯಾಹ್ನ ಮನೆಗೆ ಬಂದಾಗ ಸಾವಿನ ವಿಚಾರ ಬೆಳಕಿಗೆ ಬಂದಿದೆ.


ಸ್ಥಳೀಯರಾದ ಸೌರವ್, ಯತೀರಾಜ್, ಭವಿತ್ ಎಂಬ ಮೂವರು ಯುವಕರು ಪ್ರೇಕ್ಷಾಳ ಮನೆ ಕಡೆಗೆ ಸ್ಕೂಟರಲ್ಲಿ ಬಂದಿರುವುದನ್ನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೋರ್ವ ಸ್ಥಳೀಯ ಯುವಕನ ಬಗ್ಗೆಯೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಭವಿತ್ ಸ್ಥಳೀಯ ಕಾಂಗ್ರೆಸ್ ಮುಖಂಡನ ಮಗನಾಗಿದ್ದು ಗಾಂಜಾ ವ್ಯಸನಿಯಾಗಿದ್ದ. ಪ್ರೇಕ್ಷಾ ರೂಪದರ್ಶಿಯಾಗಿದ್ದು ಇಂದು ಮಧ್ಯಾಹ್ನ ಪೋಟೋ ಶೂಟ್ ಗೆ ಬೆಂಗಳೂರಿಗೆ ತೆರಳುವ ಸಿದ್ದತೆಯಲ್ಲಿದ್ದಳು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Update Report: ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
A 19-year-old girl who was a model by professional has been found dead in a suspicious way at her house in Kumpala, Ullal, Mangalore. The deceased has been identified as Preksha (19).
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
HK News Staffer
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm