ಬ್ರೇಕಿಂಗ್ ನ್ಯೂಸ್
10-03-21 05:51 pm Mangalore Correspondent ಕರಾವಳಿ
ಮಂಗಳೂರು, ಮಾ.10: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ ಒಂದು ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4ರ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್ ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
11 year old Anagha from mangalore bags two gold medal in the skating champion held in Mysore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm