ಪಿಕಪ್ ವಾಹನ ಚಾಲಕನ ಧಾವಂತ ; ಬ್ಯಾರಿಕೇಡ್ ಬಡಿದು ನಾಲ್ವರ ಮೇಲೆ ಹರಿದು ಯುವಕ ಸಾವು !

11-03-21 12:20 pm       Mangalore Correspondent   ಕರಾವಳಿ

ಪಿಕಪ್ ವಾಹನ ಬ್ಯಾರಿಕೇಡ್ ಗೆ ಬಡಿದು ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಪೆರಾಜೆ ಎಂಬಲ್ಲಿ ನಡೆದಿದೆ‌‌. 

ಸುಳ್ಯ, ಮಾ.11 : ಅತಿ ವೇಗದಿಂದ ಬಂದ ಪಿಕಪ್ ವಾಹನ ಬ್ಯಾರಿಕೇಡ್ ಗೆ ಬಡಿದು ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ತಾಲೂಕಿನ ಪೆರಾಜೆ ಎಂಬಲ್ಲಿ ನಡೆದಿದೆ‌‌. 

ಬುಧವಾರ ರಾತ್ರಿ 10.30ಕ್ಕೆ ಘಟನೆ ನಡೆದಿದ್ದು ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಿದ್ ಎಂದು ಗುರುತಿಸಲಾಗಿದೆ.

ಮುರ್ಷಿದ್ ತನ್ನ ಸ್ನೇಹಿತರಾದ ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರೊಂದಿಗೆ ಪೆರಾಜೆ ಕಲ್ಲುಚರ್ಪೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಬಡಿದು ಈ ನಾಲ್ವರ ಮೇಲೆ ಹರಿದಿದೆ.

ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಮಧ್ಯೆ ಮುರ್ಷಿದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.

In a tragic incident in Sullia, a  pickup van rammed on four people in which one person died on spot.