ಬ್ರೇಕಿಂಗ್ ನ್ಯೂಸ್
19-08-20 11:05 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 20: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ಮುರಾಡಿ ನಿವಾಸಿ ವಸಂತ್ (33) ಬಂಧಿತ ಆರೋಪಿ. ಈತ ನಿನ್ನೆ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಅವರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ.
ಇತ್ತ ಬೆದರಿಕೆ ಕರೆ ಆಗಮಿಸುತ್ತಿದಂತೆ ವಾಸುದೇವ ರಾವ್ ಅವರು ವಿಮಾನ ನಿಲ್ದಾಣ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗಿತ್ತು. ಆ ಬಳಿಕ ಫೋನ್ ಕರೆ ಹುಸಿ ಬೆದರಿಕೆ ಎಂಬುವುದು ಖಚಿತವಾಗಿತ್ತು.
ಘಟನೆ ಸಂಬಂಧ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಟ್ರ್ಯಾಕ್ ಮಾಡಿ ಆರೋಪಿಯನ್ನು ಪತ್ತೆ ಮಾಡಿದ್ದರು. ಸದ್ಯ ಬಂಧಿತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಈ ಕುರಿತಂತೆ ಬಜಪೆ ಠಾಣಾ ಪೊಲೀಸರಿಂದ ಪ್ರಕರಣ ದಾಖಲಾಗಿದೆ.
ಆರು ತಿಂಗಳ ಹಿಂದೆ ಆದಿತ್ಯ ರಾವ್ ಎಂಬಾತ ಇದೇ ರೀತಿ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಆವರಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದಾಗಲೇ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಶರಣಾಗಿದ್ದ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm