ಬ್ರೇಕಿಂಗ್ ನ್ಯೂಸ್
19-08-20 11:05 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 20: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ಮುರಾಡಿ ನಿವಾಸಿ ವಸಂತ್ (33) ಬಂಧಿತ ಆರೋಪಿ. ಈತ ನಿನ್ನೆ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಅವರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ.
ಇತ್ತ ಬೆದರಿಕೆ ಕರೆ ಆಗಮಿಸುತ್ತಿದಂತೆ ವಾಸುದೇವ ರಾವ್ ಅವರು ವಿಮಾನ ನಿಲ್ದಾಣ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗಿತ್ತು. ಆ ಬಳಿಕ ಫೋನ್ ಕರೆ ಹುಸಿ ಬೆದರಿಕೆ ಎಂಬುವುದು ಖಚಿತವಾಗಿತ್ತು.
ಘಟನೆ ಸಂಬಂಧ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಟ್ರ್ಯಾಕ್ ಮಾಡಿ ಆರೋಪಿಯನ್ನು ಪತ್ತೆ ಮಾಡಿದ್ದರು. ಸದ್ಯ ಬಂಧಿತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಈ ಕುರಿತಂತೆ ಬಜಪೆ ಠಾಣಾ ಪೊಲೀಸರಿಂದ ಪ್ರಕರಣ ದಾಖಲಾಗಿದೆ.
ಆರು ತಿಂಗಳ ಹಿಂದೆ ಆದಿತ್ಯ ರಾವ್ ಎಂಬಾತ ಇದೇ ರೀತಿ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಆವರಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದಾಗಲೇ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಶರಣಾಗಿದ್ದ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm