ಬ್ರೇಕಿಂಗ್ ನ್ಯೂಸ್
12-03-21 08:41 pm Mangaluru correspondent ಕರಾವಳಿ
ಉಳ್ಳಾಲ, ಮಾ.12: ಕುಂಪಲದ ಆಶ್ರಯ ಕಾಲನಿಯ ತನ್ನ ಮನೆಯಲ್ಲೇ ಅನುಮಾನಸ್ಪದವಾಗಿ ಸಾವು ಕಂಡಿದ್ದ ಅಪ್ರಾಪ್ತ ಯುವತಿ, ರೂಪದರ್ಶಿ ಪ್ರೇಕ್ಷಾಳ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

ಸಚಿವ ಅಂಗಾರರಲ್ಲಿ ಮೃತ ಪ್ರೇಕ್ಷಾಳ ತಂದೆ ಚಿತ್ತಪ್ರಸಾದ್ ಅವರು ಅಳಲನ್ನು ತೋಡಿದ್ದಾರೆ. ಮಗಳ ಮಾಡೆಲಿಂಗ್ ಹವ್ಯಾಸಕ್ಕೆ ನಾವು ಸಂಪೂರ್ಣ ಬೆಂಬಲ ನೀಡಿದ್ದೆವು. ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಫೋಟೊ ಶೂಟ್ ತೆರಳಬೇಕಿದ್ದ ನನ್ನ ಮಗಳು ಹೆಣವಾಗಿ ಮಸಣ ಸೇರಿದ್ದರ ಹಿಂದೆ ಕಾಣದ ಕೈಗಳ ನೆರಳಿದೆ. ಶಂಕಿತರ ಹೆಸರನ್ನು ಈಗಾಗಲೇ ಪೊಲೀಸರಿಗೆ ತಿಳಿಸಿದ್ದು ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಸಚಿವರಲ್ಲಿ ವಿನಂತಿಸಿದ್ದಾರೆ.

ಗಾಂಜಾ ಗ್ಯಾಂಗ್ ಮುಂದೆ ಕುಂಪಲ ಗಢ ಗಢ !
ಯುವತಿಯ ಅಸಹಜ ಸಾವಿನ ಬಗ್ಗೆ ಆರಂಭದಲ್ಲೇ ಗಟ್ಟಿ ಧ್ವನಿ ಎತ್ತಿದ್ದ ಸ್ಥಳೀಯ ಮಾಜಿ ಪುರಸಭಾ ಸದಸ್ಯ ಮೋಹನ್ ಶೆಟ್ಟಿ ಈ ಸಾವಿನ ಹಿಂದೆ ಸ್ಥಳೀಯ ಗಾಂಜಾ ಗ್ಯಾಂಗಿನ ಕೈವಾಡದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೂ ಮಾಹಿತಿ ನೀಡಿದ್ದರು. ಈ ಕಾರಣಕ್ಕೋ ಏನೋ ಗುರುವಾರ ಮಧ್ಯರಾತ್ರಿ ಗುಂಪೊಂದು ಮೋಹನ್ ಶೆಟ್ಟಿ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕುಂಪಲ ಪರಿಸರದ ಶಂಕಿತ ಹತ್ತಕ್ಕೂ ಹೆಚ್ಚು ಗಾಂಜಾ ವ್ಯಸನಿಗಳನ್ನು ವಶಕ್ಕೆ ತೆಗೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆಂದು ತಿಳಿದು ಬಂದಿದೆ.


ಕುಂಪಲ ಪರಿಸರದಲ್ಲಿ ಹದಿಹರೆಯದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದು ಗಾಂಜಾ ವಹಿವಾಟು ನಡೆಸುವ ಹುಡುಗರ ದೊಡ್ಡ ತಂಡವೇ ಕುಂಪಲದಲ್ಲಿ ಸಕ್ರಿಯವಾಗಿದೆ. ಗಾಂಜಾ ಗ್ಯಾಂಗ್ ಇದೀಗ ಕುಂಪಲವನ್ನು ಗಢ ಗಢ ನಡುಗಿಸಲಾರಂಭಿಸಿದೆ. ಸ್ಥಳೀಯರು ಮತ್ತು ಮಾಜಿ ಜಿಪಂ ಉಪಾಧ್ಯಕ್ಷರೂ ಆದ ಸತೀಶ್ ಕುಂಪಲ ಕೂಡ ತನಗೆ ಈ ಹಿಂದೆ ಗಾಂಜಾ ಗುಂಪು ಅಟ್ಯಾಕ್ ಮಾಡಿದ್ದರ ಬಗ್ಗೆ ಸಚಿವರ ಮುಂದೆ ನೋವು ಹೇಳ್ಕೊಂಡಿದ್ದಾರೆ. ಸಚಿವ ಅಂಗಾರ ಅವರು ಗಾಂಜಾ ಮಾಫಿಯಾದ ವಿರುದ್ಧ ಗ್ರಾಮಸ್ಥರೆಲ್ಲರೂ ಒಂದಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.
Suspicious Murder Death of Model girl Preksha in Kumpala in Mangalore, Minister Angara visits her house and consoles family.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm