ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm