ಬ್ರೇಕಿಂಗ್ ನ್ಯೂಸ್
13-03-21 11:16 pm Mangaluru correspondent ಕರಾವಳಿ
ಮಂಗಳೂರು, ಮಾ.13 : ಕುಂಪಲ ಆಶ್ರಯ ಕಾಲನಿ ನಿವಾಸಿ ಪ್ರೇಕ್ಷಾ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ದುರ್ಗಾವಾಹಿನಿ ಘಟಕವು ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಭಾನುವಾರ ಬೆಳಗ್ಗೆ ಗಾಂಜಾ ವಿರುದ್ಧ ಕುಂಪಲದಲ್ಲಿ ಗ್ರಾಮಸ್ಥರು ಸೇರಿ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ.
ಸೋಮೇಶ್ವರ ಗ್ರಾಮದ ಕುಂಪಲದ ಆಶ್ರಯ ಕಾಲನಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಪ್ರೇಕ್ಷಾ ಸಾವು ಅನುಮಾನಾಸ್ಪದವಾಗಿದ್ದು ಇದು ಆತ್ಮಹತ್ಯೆಯಲ್ಲ. ಕೊಲೆ ಎಂಬ ಸಂಶಯ ವ್ಯಕ್ತವಾಗುತ್ತಿದ್ದು, ಇದರ ಹಿಂದೆ 3 -4 ಯುವಕರ ಕೈವಾಡವಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ಸ್ಥಳೀಯರ ಮಾಹಿತಿ ಪ್ರಕಾರ ಮೂವರು ಯುವಕರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದು ವಿಚಾರಣೆಗೊಳಪಡಿಸಿದ್ದರು.
ಯುವತಿ ಸಾವನ್ನಪ್ಪಿದ್ದ ಕೋಣೆಯ ರ್ಯಾಕ್ ಮೇಲೆ ಆಕೆಯ ಮೊಬೈಲ್ ಸಿಕ್ಕಿದ್ದು ,ಮನೆಯ ಮಖ್ಯ ಬಾಗಿಲು ಲಾಕ್ ಆಗಿದ್ದು ಹಿಂಬಾಗಿಲನ್ನು ಮುರಿದದ್ದು ಯಾರು..? ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಪ್ರಕಾರ, ಆ ನಾಲ್ಕು ಯುವಕರು ಆಕೆಯ ಮನೆಯ ಹತ್ತಿರ ಬಂದಿದ್ದಾರೂ ಏಕೆನ್ನುವ ಅಂಶಗಳು ಪ್ರೇಕ್ಷಳ ಸಾವಿನಲ್ಲಿ ಏನೋ ಸಮ್ ಥಿಂಗ್ ಇದೆ ಎನ್ನುವುದರ ಬಗ್ಗೆ ಅನುಮಾನಗಳನ್ನು ಮೂಡಿಸುತ್ತವೆ.
ಆಶ್ರಯ ಕಾಲನಿಯ ಸ್ಥಳೀಯ ಪಂಚಾಯತ್ ಮಾಜಿ ಸದಸ್ಯನೋರ್ವನ ಮನೆಗೆ ಮೊನ್ನೆ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಿದ್ದು ಪೊಲೀಸರು ಸುಮಾರು ಹದಿಮೂರು ಯುವಕರನ್ನ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅದರಲ್ಲಿ 11 ಯುವಕರ ವರದಿ ಪಾಸಿಟಿವ್ ಬಂದಿದೆಯಂತೆ. ಇದು ಕುಂಪಲದಲ್ಲಿ ಗಾಂಜಾ ಅವ್ಯಾವಹತವಾಗಿರುವುದಕ್ಕೆ ಕೈಗನ್ನಡಿಯಾಗಿದೆ.
ಯುವತಿಯ ನಿಗೂಢ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ದುರ್ಗಾವಾಹಿನಿಯು ಡಿಸಿಪಿ ಹರಿರಾಂ ಶಂಕರ್ ಅವರ ಮುಖೇನ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಕುಂಪಲ ಪ್ರದೇಶದಲ್ಲಿ ಅವ್ಯಾಹತ ಗಾಂಜಾ ಮಾರಾಟ ಜಾಲಕ್ಕೆ ಕಡಿವಾಣ ಹಾಕಲು ಮತ್ತು ಪಂಚಾಯತ್ ಸದಸ್ಯ ಮೋಹನ್ ಅವರ ಮನೆ ಮೇಲೆ ನಡೆದ ದಾಳಿ ಖಂಡನೀಯ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದೆ.
ಭಾನುವಾರ ಬೆಳಗ್ಗೆ 7 ಗಂಟೆಗೆ ಸರಿಯಾಗಿ ಕುಂಪಲ ಅಶ್ರಯ ಕಾಲನಿಯಿಂದ ಕುಂಪಲ ಶಾಲಾ ಮೈದಾನದ ವರೆಗೆ ಮಾದಕ ವ್ಯಸನದ ವಿರುದ್ಧ ಮೆರವಣಿಗೆ ನಡೆಯಲಿದ್ದು ಊರಿನ ಎಲ್ಲಾ ಸಂಘ ಸಂಸ್ಥೆ ಗಳು ಸಂಘಟನೆಗಳು ಮಹಿಳೆಯರು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ.
ಇದೇ ವೇಳೆ, ಮೃತ ಯುವತಿಯ ಪ್ರಿಯಕರ ಎನ್ನಲಾದ ಯತಿರಾಜ್ ವಿರುದ್ಧ ಆಕೆಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಆದರೆ, ಘಟನೆಯ ನೈಜಾಂಶ ಹೊರಗೆ ತೆಗೆದಿಲ್ಲ.
ಕುಂಪಲ ; ಬೆಡ್ಡಿನಲ್ಲೇ ನಿಂತ ಸ್ಥಿತಿಯಲ್ಲಿ ಮಾಡೆಲಿಂಗ್ ಯುವತಿ ಸಾವು !! ಗಾಂಜಾ ಗ್ಯಾಂಗಿನಿಂದ ಕೊಲೆ ಶಂಕೆ !
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
Durgavahini Members meet dcp Hari Ram in connection to the Suspicious death of Model Preksha in Kumpala, Mangalore
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm