ಬ್ರೇಕಿಂಗ್ ನ್ಯೂಸ್
15-03-21 11:02 am Mangalore Correspondent ಕರಾವಳಿ
ಬಂಟ್ವಾಳ,ಮಾ.15: ಆಂಗ್ಲ ಭಾಷಾ ವ್ಯಾಮೋಹಿಗಳು ಹೆಚ್ಚಿರುವ ಈ ದಿನಗಳಲ್ಲಿ ತಮ್ಮೂರಿನ ಭಾಷೆ ತುಳು ಲಿಪಿಯನ್ನು ಕಲಿಯುವ ಆಸಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. 72ರ ಹರೆಯದ ವೃದ್ಧೆಯೋರ್ವರು ತುಳು ಲಿಪಿಯ ಪರೀಕ್ಷೆ ಬರೆಯುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಕಳೆದ ನಾಲ್ಕು ಭಾನುವಾರಗಳಲ್ಲಿ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟು ವ್ಯಾಯಾಮ ಶಾಲೆಯಲ್ಲಿ ತುಳು ಲಿಪಿ ಉಚಿತ ತರಬೇತಿ ನಡೆದಿದೆ. ತುಳು ಸಾಹಿತ್ಯ ಅಕಾಡೆಮಿ, ಯುವಜನ ವ್ಯಾಯಾಮ ಶಾಲೆ ಭಂಡಾರಬೆಟ್ಟು ಸಹಯೋಗದಲ್ಲಿ ಜೈ ತುಳು ಸಂಘಟನೆ ಇದನ್ನು ನಡೆಸಿಕೊಡುತ್ತಿದೆ.
ಇಲ್ಲಿಗೆ ಆಗಮಿಸಿದ ಸುಮಾರು 35 ಆಸಕ್ತರಲ್ಲಿ 30 ಮಂದಿ ಈ ಭಾನುವಾರ ಪರೀಕ್ಷೆಯನ್ನು ಬರೆದಿದ್ದು, ಇವರಲ್ಲಿ 72 ವರ್ಷದ ನಿವೃತ್ತ ಶಿಕ್ಷಕಿ ಎನ್.ಬಿ. ಲಕ್ಷ್ಮೀ ಅವರು ಆಸಕ್ತಿಯಿಂದ ತುಳು ಲಿಪಿ ಬರೆದು ಇತರರ ಗಮನ ಸೆಳೆದರು.
ಬಲೆ ತುಳು ಕಲ್ಪುಗ ಎಂಬ ಹೆಸರಿನಲ್ಲಿ ನಾಲ್ಕು ವಾರಗಳ ಕಾಲ ತುಳು ಲಿಪಿ ತರಬೇತಿ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ಪಡೆದಿದ್ದ ಲಕ್ಷ್ಮೀ ಅಮ್ಮ, ಇಂದು ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದರು.
ಈ ಕುರಿತು ಪ್ರತಿಕ್ರಿಯಿಸಿರುವ ತುಳು ಲಿಪಿ ಶಿಕ್ಷಕಿ ಪೂರ್ಣಿಮಾ ಬಂಟ್ವಾಳ, ಈಗಾಗಲೇ ಬಂಟ್ವಾಳ ತಾಲೂಕಿನ ಕೆದಿಲ, ಪೆರ್ನೆಗಳಲ್ಲಿ ಇದೇ ರೀತಿ ತರಬೇತಿಗಳನ್ನು ನಾವು ಉಚಿತವಾಗಿ ನೀಡುತ್ತಿದ್ದೇವೆ. ಕೆದಿಲದಲ್ಲಿ 38, ಪೆರ್ನೆಯಲ್ಲಿ 25 ಮಂದಿ ಭಾಗವಹಿಸಿದ್ದರು. ಅದೇ ರೀತಿ ಭಂಡಾರಬೆಟ್ಟಿನಲ್ಲಿ 30 ಮಂದಿ ಪರೀಕ್ಷೆ ಬರೆದಿದ್ದಾರೆ. ಉಡುಪಿ ಕಡೆಯಲ್ಲಿ ಹಿರಿಯ ನಾಗರಿಕರು ಉತ್ಸಾಹ ತೋರುತ್ತಿದ್ದು, ಬಂಟ್ವಾಳದಲ್ಲೂ ಉತ್ಸಾಹಿಗಳು ಆಗಮಿಸುತ್ತಿರುವುದು ಗಮನಾರ್ಹ ಎಂದರು. ಜೈ ತುಳುನಾಡು ಸಂಘಟನೆಯಿಂದ ಶಿಕ್ಷಕರನ್ನು ತರಬೇತಿ ಮಾಡಲಾಗುತ್ತದೆ. ಆನ್ಲೈನ್ ನಲ್ಲಿ ತರಬೇತಿ ವ್ಯವಸ್ಥೆ ಇದೆ. ಸುಳ್ಯದಿಂದ ಜಗದೀಶ ಗೌಡ ಮತ್ತು ಬಬಿತಾ ಗೌಡ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.
72-year-old Laxmi appeared for Tulu script examination at Bhandaribettu gymnasium in the taluk. By doing so, she has set an example for the young people to follow.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm