ಬ್ರೇಕಿಂಗ್ ನ್ಯೂಸ್
 
            
                        15-03-21 06:11 pm Mangalore Correspondent ಕರಾವಳಿ
 
            ಉಳ್ಳಾಲ, ಮಾ.15: ಕಳೆದೊಂದು ವಾರ ಜವರಾಯ ಉಳ್ಳಾಲದ ಕುಂಪಲದಲ್ಲಿ ಕಂಬಳಿ ಹೊದ್ದು ಮಲಗಿದ್ದನೋ ಏನೋ.. ಯಾಕಂದ್ರೆ, ಒಂದೇ ವಾರದಲ್ಲಿ ಕುಂಪಲ ಪ್ರದೇಶದಲ್ಲಿ ಸರಣಿಯಂತೆ ಮೂವರು ಅಕಾಲಿಕವಾಗಿ ಸಾವು ಕಂಡಿದ್ದಾರೆ. ಕಳೆದ ಸೋಮವಾರದಿಂದ ಶುಕ್ರವಾರದ ನಡುವೆ ಕುಂಪಲದಲ್ಲಿ ಮೂವರು ಅಕಾಲಿಕ ಸಾವನ್ನಪ್ಪಿದ್ದು ಇಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.


ಮಾ.10ರ ಬುಧವಾರ ಆಶ್ರಯ ಕಾಲನಿ ನಿವಾಸಿ ಯುವತಿ ರೂಪದರ್ಶಿ ಪ್ರೇಕ್ಷಾ(17) ಅಸಹಜ ಆತ್ಮಹತ್ಯೆ ಪ್ರಕರಣ ಬಹಳಷ್ಟು ಸುದ್ದಿಯಾಗಿತ್ತು. ಪ್ರಕರಣದಲ್ಲಿ ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಆಕೆಯ ಗೆಳೆಯ ಮುಂಡೋಳಿ ನಿವಾಸಿ ಯತಿನ್ ರಾಜ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಯತಿನ್ ರಾಜ್ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರೂ ಪ್ರೇಕ್ಷಾ ಸಾವಿನ ಬಗ್ಗೆ ಇರುವ ನಿಗೂಢತೆ ಇನ್ನೂ ಹಾಗೆಯೇ ಉಳಿದಿದೆ. ಅಲ್ಲದೆ ಯುವತಿಯ ಸಾವಿಗೆ ಸ್ಥಳೀಯವಾಗಿ ಬೇರೂರಿರುವ ಗಾಂಜಾ ಮಾಫಿಯಾವೇ ಕಾರಣವೆಂದು ಗಾಂಜಾ ವ್ಯಸನಿಗಳ ವಿರುದ್ದ ಕುಂಪಲ ನಿವಾಸಿಗಳು ಅಭಿಯಾನ ಆರಂಭಿಸಿದ್ದಾರೆ.

ಪ್ರೇಕ್ಷಾ ಸಾವಿಗೂ ಎರಡು ದಿನದ ಹಿಂದೆ ಅಂದರೆ, ಮಾ.8ರ ಸೋಮವಾರ ರಾತ್ರಿ ಕುಂಪಲ ಬಾರ್ದೆ ನಿವಾಸಿ ನವ ವಿವಾಹಿತ ಲವಿತ್ ಕುಮಾರ್(34) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಭವಿಷ್ಯದ ಕನಸುಗಳನ್ನು ಹೊತ್ತು ಕಳೆದ ಜನವರಿ ಅಂತ್ಯದಲ್ಲಿ ಹಸೆಮಣೆ ಏರಿದ್ದ ಲವಿತ್ ಅಕಾಲಿಕವಾಗಿ ಸಾವನ್ನಪ್ಪಿದ್ದು ಈ ಭಾಗದ ಜನರನ್ನು ಶೋಕದಲ್ಲಿ ಮುಳುಗಿಸಿತ್ತು. ನಂತರ ಎರಡೇ ದಿನದಲ್ಲಿ ಪ್ರೇಕ್ಷಾ ಅಸಹಜ ಸಾವನ್ನಪ್ಪಿದ್ದಳು.

ತಂದೆಯಾಗಬೇಕಿದ್ದ ನವವಿವಾಹಿತನ ಸಾವು !
ವಾರಾಂತ್ಯದ ಮಾ.12 ರ ಶುಕ್ರವಾರ ರಾತ್ರಿ ಮತ್ತೊಬ್ಬರು ಅಸಹಜ ಸಾವು ಕಂಡಿದ್ದಾರೆ. ಕುಂಪಲ ಮೂರುಕಟ್ಟೆಯ ಬಾಡಿಗೆ ಮನೆ ನಿವಾಸಿ ಮೂಲತಃ ಕಡಬ ಮರ್ದಾಳ ನಿವಾಸಿ ರಾಧಾಕೃಷ್ಣ (40) ಮನೆಯಲ್ಲಿ ಏಕಾಂಗಿ ಇದ್ದ ಸಂದರ್ಭ ಅಧಿಕ ರಕ್ತದೊತ್ತಡದಿಂದ ಬಳಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಎರಡು ವಾರಗಳ ಹಿಂದಷ್ಟೆ ಪತ್ನಿ ಜಯಂತಿಯನ್ನ ಸೀಮಂತ ಶಾಸ್ತ್ರ ಮುಗಿಸಿ ತವರು ಮನೆಗೆ ಕಳಿಸಿಕೊಟ್ಟಿದ್ದ ರಾಧಾಕೃಷ್ಣ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಕಾಲಿಕ ಸಾವು ಕಂಡಿದ್ದಾರೆ. ಮಧ್ಯರಾತ್ರಿಯಲ್ಲಿ ಬಿಪಿ ಏರಿಳಿತ ಆಗಿದ್ದೇ ಸಾವಿಗೆ ಕಾರಣ ಎನ್ನಲಾಗಿತ್ತು. ಈ ಸಾವು ಕೂಡ ಬೆಳಕಿಗೆ ಬಂದಿದ್ದು ಮರುದಿನವಾಗಿತ್ತು.

ಹೀಗಾಗಿ ಕುಂಪಲ ಪ್ರದೇಶದ ನಿವಾಸಿಗಳಿಗೆ ಕಳೆದ ವಾರವಿಡೀ ಶೋಕದ ದಿನಗಳು. ನೋವು, ವೇದನೆಗಳನ್ನು ಕೊಟ್ಟ ವಾರ. ಇದೇ ವೇದನೆಯ ನಡುವೆ, ಇಲ್ಲಿನ ನಿವಾಸಿಗಳು ಗಾಂಜಾ ವ್ಯಸನಿಗಳ ವಿರುದ್ಧ ಹೋರಾಟವನ್ನೂ ಆರಂಭಿಸಿದ್ದಾರೆ. ಆದರೆ, ಅವರಲ್ಲಿನ ಭೀತಿ ಇನ್ನೂ ತೊಲಗಿಲ್ಲ. ಅಸಹಜ ಸಾವುಗಳೇ ಹಾಗೆ. ಅನಿರೀಕ್ಷಿತ ಆಗಿ ಒದಗುವ ಅಪಘಾತಗಳಂತೆ. ಜೊತೆಗಿದ್ದವರೇ ಇನ್ನಿಲ್ಲವಾಗುತ್ತಾರೆ.. ಕುಂಪಲದ ಜನ ತಮ್ಮ ಒಡನಾಡಿಗಳನ್ನು ಕಳಕೊಂಡಿದ್ದಾರೆ.
 
            
            
            Mangalore, Kampala reports three suspicious death in one week. Death of a Model, death of a Man at home and death of a newly married bride groom.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm