ಬ್ರೇಕಿಂಗ್ ನ್ಯೂಸ್
16-03-21 09:35 am Mangaluru correspondent ಕರಾವಳಿ
ಮಂಗಳೂರು, ಮಾ.15: ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ.
ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.
ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ.
ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.
Health Authorities Shut Yenepoya Medical College as No of Covid cases in students spike up. It is said more than 20 students are tested positive in Yenepoya Hostel in Mangalore.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm