ಬ್ರೇಕಿಂಗ್ ನ್ಯೂಸ್
16-03-21 12:37 pm Mangalore Correspondent ಕರಾವಳಿ
ಮಂಗಳೂರು, ಮಾ16 : ಒಂದು ತಿಂಗಳಿಂದ ಸ್ಥಗಿತಗೊಂಡಿರುವ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮುಂದುವರಿಸಲು ಕೊನೆಗೂ ಹೈಕೋರ್ಟ್ ಅನುಮತಿ ನೀಡಿದೆ.
ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ(ನೀರಿ) ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲು ಬದ್ಧ ಎಂದು ರಾಜ್ಯ ಸರಕಾರ ಭರವಸೆ ನೀಡಿದ್ದು ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮುಂದುವರಿಸಲು ಅನುಮತಿ ನೀಡಿದೆ. ಪಚ್ಚನಾಡಿ, ಕುಡುಪು, ಮಂದಾರ ಪ್ರದೇಶದಲ್ಲಿನ ಘನತ್ಯಾಜ್ಯ ಕುಸಿತದಿಂದ ಉಂಟಾದ ಅವಘಡದ ಹಿನ್ನೆಲೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ಹಾಜರಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾಮಗಾರಿಗಳಲ್ಲಿ ನೀರಿ ಸಂಸ್ಥೆ ಸೂಚಿಸಿದ ಮಾರ್ಗಸೂಚಿ ಪಾಲಿಸಲು ಬದ್ಧ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಜತೆಗೆ ಈ ಕುರಿತ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮುಚ್ಚಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಮುಚ್ಚಳಿಕೆ ಹಾಗೂ ಮಾರ್ಗಸೂಚಿಗಳನ್ನು ಪಾಲಿಸುವ ಬಗ್ಗೆ ಭರವಸೆ ನೀಡಿರುವುದರಿಂದ ಕಾಮಗಾರಿಗಳನ್ನು ಮುಂದುವರಿಸಲು ಅನುಮತಿ ನೀಡುತ್ತಿರುವುದಾಗಿ ಹೈಕೋರ್ಟ್ ಹೇಳಿದೆ. ಮುಂದಿನ ವಿಚಾರಣೆ ಮಾ.30 ರಂದು ನಡೆಯಲಿದೆ.
On the basis of the assurance of the government that it is committed to stick to the guidelines which may be stipulated by the National Environmental Engineering Research Institute (NEERI), the state high court (HC), which had ordered suspension of all smart city project work, on Monday March 15, permitted to go ahead.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm