ಬ್ರೇಕಿಂಗ್ ನ್ಯೂಸ್
18-03-21 02:42 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದಲ್ಲಿ 70 ಜಿಲ್ಲೆಗಳನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಪಾಯಕಾರಿ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡವೂ ಒಳಗೊಂಡಿದೆ ಎನ್ನುವ ವಿಚಾರವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದೃಢಪಡಿಸಿದ್ದಾರೆ.

ಮಾರ್ಚ್ 1ರಿಂದ 15ರ ನಡುವೆ ಕೊರೊನಾ ರಿಪೋರ್ಟ್ ಆಗಿರುವ ಬಗ್ಗೆ ಕೇಂದ್ರ ಸರಕಾರ ಮಾಹಿತಿ ಪಡೆದಿತ್ತು. ದೇಶದ ಎಲ್ಲ ಜಿಲ್ಲೆಗಳಿಂದಲೂ ಪ್ರತಿದಿನ ವರದಿಯಾದ ಕೊರೊನಾ ಪಾಸಿಟಿವ್ ಅಂಕಿ ಅಂಶಗಳನ್ನು ಆಧರಿಸಿ, ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಲಾಗಿದೆ. ಹದಿನೈದು ದಿನಗಳಲ್ಲಿ ಕೊರೊನಾ ಸೋಂಕಿನ ಹೆಚ್ಚಳ ಆಗಿರುವುದನ್ನು ಈ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 70 ಜಿಲ್ಲೆಗಳು ಕರ್ನಾಟಕ, ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿದ್ದು ಈ ಐದು ರಾಜ್ಯಗಳಲ್ಲಿ ಹೆಚ್ಚು ನಿಗಾ ವಹಿಸಲು ಮೋದಿ ಆಯಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಸೂಚನೆ ನೀಡಿದ್ದರು. ಅಲ್ಲದೆ, ಪಟ್ಟಿಯಲ್ಲಿರುವ 70 ಜಿಲ್ಲೆಗಳಲ್ಲಿ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸೂಚನೆ ನೀಡಿದ್ದರು.


ಕರ್ನಾಟಕದಲ್ಲಿ ದಕ್ಷಿಣ ಕನ್ನಡ ನಾಲ್ಕನೇ ಸ್ಥಾನದಲ್ಲಿದ್ದು, ಮೊದಲ ಹಂತದಲ್ಲಿ ಬೀದರ್, ಕಲ್ಬುರ್ಗಿ, ಮೈಸೂರು, ಬೆಂಗಳೂರು ಇದೆ. ಹೈ ರಿಸ್ಕ್ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ಇವೂ ಇದ್ದು, ಸಿಎಂ ಯಡಿಯೂರಪ್ಪ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಬಿಗಿ ಗೊಳಿಸಲು ಸೂಚನೆ ನೀಡಿದ್ದಾರೆ. ಒಳಾಂಗಣದಲ್ಲಿ ನಡೆಯುವ ಯಾವುದೇ ರೀತಿಯ ಮದುವೆ, ಇನ್ನಿತರ ಸಮಾರಂಭಗಳಲ್ಲಿ 200ಕ್ಕು ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು, ಇದರ ಜೊತೆಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ಜಿಲ್ಲಾಡಳಿತಗಳಿಗೆ ನೀಡಿದ್ದಾರೆ.
ಮಾಸ್ಕ್ ಧರಿಸದೆ ಹೊರಗೆ ತೆರಳುವಂತಿಲ್ಲ ! ಕೊರೊನಾ ತಡೆಗೆ ಸಿಎಂ ಕಠಿಣ ನಿಯಮ ಜಾರಿ
ಕೊರೊನಾ ಹರಡದಂತೆ ಎಚ್ಚರ ವಹಿಸಿ ; ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ
Covid second wave Dakshina Kannada listed for high-risk zone among India's 70 districts said DC of Mangalore Dr Rajendra Kumar.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm