ಬ್ರೇಕಿಂಗ್ ನ್ಯೂಸ್
18-03-21 03:57 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೇಂದ್ರ ಸರಕಾರ ದಕ್ಷಿಣ ಕನ್ನಡವನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಿರುವ ಬೆನ್ನಲ್ಲೇ ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಗದಾ ಪ್ರಹಾರಕ್ಕೆ ಮುಂದಾಗಿದ್ದಾರೆ. ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಜನರು ಹೆಚ್ಚು ತಲೆಕೆಡಿಸಿಕೊಳ್ಳದ ಕಾರಣ ಜಿಲ್ಲಾಧಿಕಾರಿಗಳು ಹೊಸ ರೀತಿಯ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳನ್ನು ಒಳಪಡಿಸಿ ಫೀಲ್ಡಿಗೆ ಇಳಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಚಿಂತನೆ ನಡೆಸಿದ್ದಾರೆ. ಪ್ರತಿ ದಿನವೂ ಅಧಿಕಾರಿ ವರ್ಗ ಒಂದು ಗಂಟೆ ಕಾಲ ಫೀಲ್ಡಿಗೆ ತೆರಳಬೇಕು. ಬಸ್, ಇನ್ನಿತರ ವಾಹನ, ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ನಡೆಸಬೇಕು. ಸಭೆ, ಸಮಾರಂಭಗಳು ನಡೆಯುವ ಹಾಲ್ ಗಳಲ್ಲಿ ಜನರು ಮಾಸ್ಕ್ ಹಾಕಿದ್ದಾರೋ, ನಿಗದಿಗಿಂತ ಹೆಚ್ಚು ಜನ ಭಾಗವಹಿಸಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಸಾರಿಗೆ ವಾಹನಗಳಲ್ಲಿ ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದರೆ, ಚಾಲಕ, ನಿರ್ವಾಹಕನಿಗೆ ದಂಡ ವಿಧಿಸಲು ಸೂಚನೆ ನೀಡಿದ್ದಾರೆ.
ತಪಾಸಣೆ ನಡೆಸುವ ಸಂದರ್ಭದಲ್ಲಿ ಮದುವೆ ಸಮಾರಂಭದ ಹಾಲ್ ಗಳಲ್ಲಿ ಮಾರ್ಗಸೂಚಿ ಪಾಲನೆ ಆಗಿಲ್ಲದಿದ್ದರೆ, ಅದರ ಮಾಲೀಕರಿಗೆ ದಂಡ ವಿಧಿಸುವುದು. ಮಾಲ್ ಗಳಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಜನ ಗುಂಪು ಕೂಡಿದ್ದರೆ ಮಾಲ್ ಮಾಲೀಕರಿಗೆ ದಂಡ ಮತ್ತು ಪ್ರಕರಣ ದಾಖಲಿಸುವುದು, ಸಿನಿಮಾ ಥಿಯೇಟರ್ ಗಳಲ್ಲಿ ಒಬ್ಬ ಮಾಸ್ಕ್ ಹಾಕಿರದೇ ಇದ್ದರೂ, ಟಾಕೀಸ್ ಮಾಲೀಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದ್ದಾರೆ.
ಹೊಸ ಪ್ರಯೋಗದಲ್ಲಿ ಎಸಿಪಿ, ಡಿಸಿಪಿ ದರ್ಜೆಯ ಪೊಲೀಸ್ ಅಧಿಕಾರಿಗಳು, ಜಿಪಂ ಸಿಇಓ, ಪಾಲಿಕೆ ಕಮಿಷನರ್, ಜಿಲ್ಲಾ ಮಟ್ಟದ ಪ್ರಮುಖ ಇಲಾಖಾ ಮುಖ್ಯಸ್ಥರು ಹೀಗೆ ಐಪಿಎಸ್, ಐಎಎಸ್ ದರ್ಜೆಯ ಅಧಿಕಾರಿಗಳು ಒಳಗೊಳ್ಳಲಿದ್ದು, ಅಧಿಕಾರಿ ವರ್ಗ ದಿನದಲ್ಲಿ ಒಂದು ಗಂಟೆ ಫೀಲ್ಡಿಗೆ ತೆರಳಿ, ಕೊರೊನಾ ನಿರ್ಬಂಧ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.
ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಸಹಕಾರ ನೀಡದಿದ್ದರೇ, ಅಧಿಕಾರಿಗಳ ಮೂಲಕವೇ ಪರೋಕ್ಷ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು ಹೊಸ ಉಪಾಯ ಹೂಡಿದ್ದಾರೆ. ತಕ್ಷಣದಿಂದಲೇ ಅಧಿಕಾರಿಗಳು ಫೀಲ್ಡಿಗೆ ಬರಲಿದ್ದು, 15 ದಿನಗಳ ಕಾಲ ಈ ರೀತಿಯ ದಂಡ ಪ್ರಯೋಗ ನಡೆಸಲಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Read: ಕೋವಿಡ್ ; ಹೈರಿಸ್ಕ್ ಝೋನಲ್ಲಿ ಮಂಗಳೂರು ! ದೇಶದಲ್ಲಿ 70 ಜಿಲ್ಲೆಗಳ ಪಟ್ಟಿ ಬಿಡುಗಡೆ
Mangalore DC Rajendra Kumar orders new rules to Malls and Theaters, Market places and general public to avoid Covid Second Wave.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm