ಬ್ರೇಕಿಂಗ್ ನ್ಯೂಸ್
18-03-21 03:57 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೇಂದ್ರ ಸರಕಾರ ದಕ್ಷಿಣ ಕನ್ನಡವನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಿರುವ ಬೆನ್ನಲ್ಲೇ ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಗದಾ ಪ್ರಹಾರಕ್ಕೆ ಮುಂದಾಗಿದ್ದಾರೆ. ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಜನರು ಹೆಚ್ಚು ತಲೆಕೆಡಿಸಿಕೊಳ್ಳದ ಕಾರಣ ಜಿಲ್ಲಾಧಿಕಾರಿಗಳು ಹೊಸ ರೀತಿಯ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳನ್ನು ಒಳಪಡಿಸಿ ಫೀಲ್ಡಿಗೆ ಇಳಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಚಿಂತನೆ ನಡೆಸಿದ್ದಾರೆ. ಪ್ರತಿ ದಿನವೂ ಅಧಿಕಾರಿ ವರ್ಗ ಒಂದು ಗಂಟೆ ಕಾಲ ಫೀಲ್ಡಿಗೆ ತೆರಳಬೇಕು. ಬಸ್, ಇನ್ನಿತರ ವಾಹನ, ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ನಡೆಸಬೇಕು. ಸಭೆ, ಸಮಾರಂಭಗಳು ನಡೆಯುವ ಹಾಲ್ ಗಳಲ್ಲಿ ಜನರು ಮಾಸ್ಕ್ ಹಾಕಿದ್ದಾರೋ, ನಿಗದಿಗಿಂತ ಹೆಚ್ಚು ಜನ ಭಾಗವಹಿಸಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಸಾರಿಗೆ ವಾಹನಗಳಲ್ಲಿ ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದರೆ, ಚಾಲಕ, ನಿರ್ವಾಹಕನಿಗೆ ದಂಡ ವಿಧಿಸಲು ಸೂಚನೆ ನೀಡಿದ್ದಾರೆ.


ತಪಾಸಣೆ ನಡೆಸುವ ಸಂದರ್ಭದಲ್ಲಿ ಮದುವೆ ಸಮಾರಂಭದ ಹಾಲ್ ಗಳಲ್ಲಿ ಮಾರ್ಗಸೂಚಿ ಪಾಲನೆ ಆಗಿಲ್ಲದಿದ್ದರೆ, ಅದರ ಮಾಲೀಕರಿಗೆ ದಂಡ ವಿಧಿಸುವುದು. ಮಾಲ್ ಗಳಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಜನ ಗುಂಪು ಕೂಡಿದ್ದರೆ ಮಾಲ್ ಮಾಲೀಕರಿಗೆ ದಂಡ ಮತ್ತು ಪ್ರಕರಣ ದಾಖಲಿಸುವುದು, ಸಿನಿಮಾ ಥಿಯೇಟರ್ ಗಳಲ್ಲಿ ಒಬ್ಬ ಮಾಸ್ಕ್ ಹಾಕಿರದೇ ಇದ್ದರೂ, ಟಾಕೀಸ್ ಮಾಲೀಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದ್ದಾರೆ.

ಹೊಸ ಪ್ರಯೋಗದಲ್ಲಿ ಎಸಿಪಿ, ಡಿಸಿಪಿ ದರ್ಜೆಯ ಪೊಲೀಸ್ ಅಧಿಕಾರಿಗಳು, ಜಿಪಂ ಸಿಇಓ, ಪಾಲಿಕೆ ಕಮಿಷನರ್, ಜಿಲ್ಲಾ ಮಟ್ಟದ ಪ್ರಮುಖ ಇಲಾಖಾ ಮುಖ್ಯಸ್ಥರು ಹೀಗೆ ಐಪಿಎಸ್, ಐಎಎಸ್ ದರ್ಜೆಯ ಅಧಿಕಾರಿಗಳು ಒಳಗೊಳ್ಳಲಿದ್ದು, ಅಧಿಕಾರಿ ವರ್ಗ ದಿನದಲ್ಲಿ ಒಂದು ಗಂಟೆ ಫೀಲ್ಡಿಗೆ ತೆರಳಿ, ಕೊರೊನಾ ನಿರ್ಬಂಧ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಸಹಕಾರ ನೀಡದಿದ್ದರೇ, ಅಧಿಕಾರಿಗಳ ಮೂಲಕವೇ ಪರೋಕ್ಷ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು ಹೊಸ ಉಪಾಯ ಹೂಡಿದ್ದಾರೆ. ತಕ್ಷಣದಿಂದಲೇ ಅಧಿಕಾರಿಗಳು ಫೀಲ್ಡಿಗೆ ಬರಲಿದ್ದು, 15 ದಿನಗಳ ಕಾಲ ಈ ರೀತಿಯ ದಂಡ ಪ್ರಯೋಗ ನಡೆಸಲಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Read: ಕೋವಿಡ್ ; ಹೈರಿಸ್ಕ್ ಝೋನಲ್ಲಿ ಮಂಗಳೂರು ! ದೇಶದಲ್ಲಿ 70 ಜಿಲ್ಲೆಗಳ ಪಟ್ಟಿ ಬಿಡುಗಡೆ
Mangalore DC Rajendra Kumar orders new rules to Malls and Theaters, Market places and general public to avoid Covid Second Wave.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm