ಬ್ರೇಕಿಂಗ್ ನ್ಯೂಸ್
18-03-21 05:37 pm Mangalore Correspondent ಕರಾವಳಿ
ಮಂಗಳೂರು, ಮಾ.18 : ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ಕಂಬಳಕ್ಕೂ ತಲಾ ಐದು ಲಕ್ಷ ಸಹಾಯ ಧನ ನೀಡಲು ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.


ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ್, ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5 ಲಕ್ಷ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಂಬಳಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಸಚಿವ ಯೋಗೀಶ್ವರ್ ಹೇಳಿದ್ದರು. ಪ್ರತಿ ಕಂಬಳಕ್ಕೆ ರೂ. 5 ಲಕ್ಷಗಳನ್ನು ಸಹಾಯಧನ ರೂಪದಲ್ಲಿ ನೀಡುವುದಾಗಿ ಹೇಳಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷಗಳನ್ನು ಹೀಗೆ ಒಟ್ಟು ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು. ಆದರೆ, ಈ ಸಹಾಯಧನ ಪಡೆಯಲು ಷರತ್ತು ವಿಧಿಸಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಂಬಳವನ್ನು ಆಯ್ಕೆ ಮಾಡತಕ್ಕದ್ದು. ಆಯೋಜಿಸಲಾಗುವ ಕಂಬಳವು ಅತ್ಯಧಿಕ ಸಂಖ್ಯೆಯಲ್ಲಿ ಆಕರ್ಷಿಸುವಂತಿರಬೇಕು. ಕಂಬಳವನ್ನು ಒಂದು ಗುಂಪು ಅಥವಾ ತಂಡದಿಂದ ಆಯೋಜಿಸಬೇಕು. ಸದರಿ ತಂಡವು ಒಂದು ಕುಟುಂಬಕ್ಕೆ ಸೇರಿದಂತಿರಬಾರದು. ಮಂಜೂರು ಮಾಡಿದ ಹಣವನ್ನು ಬಳಕೆ ಮಾಡಿದ್ದಕ್ಕೆ ಲೆಕ್ಕ ಪರಿಶೋಧಕರಿಂದ ಲೆಕ್ಕಪಟ್ಟಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Mangalore Backing Kambala 5 lakhs to every kambala event from government declared Karnataka Tourism Minister C. P. Yogeshwar.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm