ಬ್ರೇಕಿಂಗ್ ನ್ಯೂಸ್
18-03-21 11:27 pm Mangaluru correspondent ಕರಾವಳಿ
ಮಂಗಳೂರು, ಮಾ.18 : ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸತ್ರ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.
ಕೆಮ್ರಾಲ್ ಮುಲ್ಯೊಟ್ಟು ನಿವಾಸಿ ದಿನೇಶ್ ಶೆಟ್ಟಿ (41) ಶಿಕ್ಷೆಗೊಳಗಾದ ಆರೋಪಿ.
ಆರೋಪಿ ದಿನೇಶ್ ತನ್ನ ಪರಿಚಯದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2018ರ ಡಿಸೆಂಬರ್ 23ರ ರಾತ್ರಿ ಮತ್ತು 2019ರ ಜನವರಿ 6ರಂದು ಮಧ್ಯಾಹ್ನ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಇದಾದ ಎರಡು ತಿಂಗಳ ನಂತರ ಯುವತಿ ಅನಾರೋಗ್ಯಕ್ಕೆ ಈಡಾಗಿದ್ದಾಳೆ. ಪೋಷಕರ ಜತೆ ವೈದ್ಯರ ಬಳಿ ತೆರಳಿ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಪೋಷಕರು ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ದಿನೇಶ್ ಶೆಟ್ಟಿ ಅತ್ಯಾಚಾರಗೈದಿರುವ ವಿಷಯ ಬಯಲಿಗೆ ಬಂದಿತ್ತು.
ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿತ್ತು. ಮಗುವಿನ ಡಿಎನ್ಎ ಪರೀಕ್ಷೆಯಲ್ಲೂ ಆರೋಪ ದೃಢಪಟ್ಟಿತ್ತು.

ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಪ್ರಕರಣವನ್ನು ಸಮಗ್ರ ವಿಚಾರಣೆ ನಡೆಸಿದ ನಂತರ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಸಾಕ್ಷಿ ಹೇಳಿದ್ದು, 12 ದಾಖಲೆಗಳನ್ನು ಪರಿಗಣಿಸಲಾಗಿದೆ.
ಆರೋಪಿಗೆ ಐಪಿಸಿ 376 ಪ್ರಕರಣದಡಿ 7 ವರ್ಷ ಕಠಿಣ ಸಜೆ, 5ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1 ತಿಂಗಳ ಕಠಿಣ ಸಜೆ, ಪೋಕ್ಸೋ ಪ್ರಕರಣದಡಿ 10 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಆರೋಪಿಯ ಬಂಧನದ ನಂತರ 2 ವರ್ಷ ನ್ಯಾಯಾಂಗ ಬಂಧನದಲ್ಲಿದ್ದು, ಈ ಅವಧಿ ಶಿಕ್ಷೆಯಲ್ಲಿ ಕಡಿತಗೊಳ್ಳಲಿದೆ. ದಂಡದ ಮೊತ್ತದಲ್ಲಿ 45 ಸಾವಿರ ರೂ.ವನ್ನು ನೊಂದ ಬಾಲಕಿಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದಲೂ ಬಾಲಕಿ ಪರಿಹಾರ ಪಡೆಯಲು ಅರ್ಹರು ಎಂದು ಆದೇಶಿಸಲಾಗಿದೆ.
ಆರೋಪಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ಮದುವೆಯಾಗಿ, ಇಬ್ಬರು ಮಕ್ಕಳು ಇದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಮೂಲ್ಕಿ ಇನ್ಸ್ಪೆಕ್ಟರ್ ಆಗಿದ್ದ ಪಿ.ಎಂ. ಸಿದ್ದರಾಜು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
Mangalore Girl cheated in the name of marriage and raped court orders 10 years imprisonment to boy. The accused has been identified as Dinesh Shetty.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm