ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.
ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm