ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm