ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.
ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 01:34 pm
Mangalore Correspondent
Wizdom Education, Guruvandana, Mangalore: ಮಂಗ...
17-07-25 01:26 pm
Mangalore Rain, School College Holiday: ಕರಾವಳ...
16-07-25 10:52 pm
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm