ಬ್ರೇಕಿಂಗ್ ನ್ಯೂಸ್
19-03-21 06:07 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಭಾರತೀಯ ಜನತಾ ಪಕ್ಷವು ಲಾಭಕ್ಕಾಗಿ ರಾಜಕೀಯ ಮಾಡಲ್ಲ ಎಂಬುದಕ್ಕೆ ಸಂತೋಷ್ ಬೋಳಿಯಾರ್ ಅವರ ಕಾರ್ಯ ವೈಖರಿಯೇ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಹೇಳಿದರು.
ಕರ್ನಾಟಕ ಸರಕಾರದ ಉದ್ಯಮ ದಿ ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿ. ಬೆಂಗಳೂರು ಇದರ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ( CSR) ಕಾರ್ಯಕ್ರಮದ ಅಡಿಯಲ್ಲಿ ಬೋಳಿಯಾರಿನ ಅಮರದೀಪ ಸಭಾಂಗಣದಲ್ಲಿ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಆಯ್ದ ಸಮಾಜ ಸೇವೆ ಸಂಸ್ಥೆಗಳು ಮತ್ತು ಶಾಲೆಗಳಿಗೆ ನೀಡಲಾಗುವ ವಿಶೇಷ ನಿಧಿಯ ಚೆಕ್ ವಿತರಣಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿಯು ಲಾಭಕ್ಕಾಗಿ ರಾಜಕೀಯ ಎಂದಿಗೂ ಮಾಡಿಲ್ಲ ಎಂಬುದಕ್ಕೆ ಪೂರಕವಾಗಿ ಸಂತೋಷ್ ರೈಯವರು ತಾನು ಅಧ್ಯಕ್ಷನಾಗಿರುವ ಸಂಸ್ಥೆಯಿಂದ ತನ್ನ ಗ್ರಾಮಕ್ಕೆ ಸುಮಾರು 25 ಲಕ್ಷ ವಿಶೇಷ ಅನುದಾನವನ್ನು ತಂದಿದ್ದಾರೆ. ಇದುವರೆಗೆ ಕಿಯೋನಿಕ್ಸ್ ಮತ್ತು ದಿ ಮೈಸೂರು ಇಲೆಕ್ಟ್ರಿಕಲ್ ಲಿ. ಎರಡು ಸಂಸ್ಥೆ ಹೆಸರು ಯಾರಿಗೂ ಗೊತ್ತಿರಲಿಲ್ಲ. ಈ ಸ್ಥಾನಗಳನ್ನು ಶಾಸಕರು ಅಥವಾ ಸಚಿವರಿಗೆ ಹೆಚ್ಚುವರಿಯಾಗಿ ನೀಡುತ್ತಿದ್ದರು. ಆದರೆ ಬಿಜೆಪಿ ಸರಕಾರವು ಈ ಎರಡು ಸ್ಥಾನಗಳನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ನೀಡಿದೆ. ಸಂತೋಷ್ ಅವರು ನಮ್ಮ ಜಿಲ್ಲೆಯ ಸುಮಾರು 35 ಜನರಿಗೆ ಅವರು ಪ್ರತಿನಿಧಿಸುವ ಸಂಸ್ಥೆಯಲ್ಲಿ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದ್ದಾರೆ. ಮುಂದಿನ ವರ್ಷದಲ್ಲಿ ಅವರು ಪ್ರತಿನಿಧಿಸುವ ಸಂಸ್ಥೆಯು ಕೋಟ್ಯಂತರ ರೂಪಾಯಿ ಲಾಭ ಗಳಿಸಲಿ. ಆಗ ಸಿಎಸ್ ಆರ್ ನಿಧಿ ಕೂಡ ಹೆಚ್ಚು ದೊರಕಿ ಜಿಲ್ಲೆಗೆ ಅನುಕೂಲವಾಗುವುದೆಂದರು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರಿನ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್ ಮಾತನಾಡಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಶಾಲೆ ಹಾಗೂ ಸೇವಾ ಸಂಸ್ಥೆಗಳಿಗೆ ಅನುದಾನ ಒದಗಿಸಿಕೊಟ್ಟಿದ್ದು ಈ ಅನುದಾನದಲ್ಲಿ ಯಾವುದೇ ಮಧ್ಯವರ್ತಿಗಳು ನುಸುಳದಂತೆ ನೇರ ಫಲಾನುಭವಿ ಸಂಸ್ಥೆಗಳಿಗೆ ನಿಧಿ ಸಿಗುವಂತೆ ಮಾಡಿದ್ದೇನೆ.
ಇನ್ನೂ ಹಲವಾರು ಸಂಸ್ಥೆಗಳು ವಿಶೇಷ ನಿಧಿಗೆ ಬೇಡಿಕೆ ಇಟ್ಟಿವೆ. ಮುಂದಿನ ದಿವಸಗಳಲ್ಲಿ ನೂರಾರು ಶಾಲೆಗೆ ಅನುದಾನ ಕೊಡುವ ಶಕ್ತಿ ಭಗವಂತನು ತನಗೆ ನೀಡಲಿ ಎಂದರು.
ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲೆಯ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್, ಕ್ಯಾಂಪ್ಕೊ ನಿರ್ದೇಶಕರಾದ ಮಹೇಶ್ ಚೌಟ, ಎಪಿಎಮ್ ಸಿ ಮಾಜಿ ಅಧ್ಯಕ್ಷ ಪ್ರಶಾಂತ್ ಗಟ್ಟಿ, ಹರೇಕಳ ರಾಮಕೃಷ್ಣ ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ರವೀಂದ್ರ ರೈ ಮೊದಲಾದವರು ಉಪಸ್ಥಿತರಿದ್ದರು.
25 lakhs cheque donated from Mysore electricals towards ullal bolyar development by President Santosh.
28-04-24 09:39 pm
HK News Desk
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
Prajwal Revanna sex video leak case: ವಿಡಿಯೋ ಪ...
28-04-24 04:26 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
28-04-24 11:03 pm
Udupi Correspondent
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
28-04-24 09:46 pm
HK News Desk
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm