ಗುದನಾಳದಲ್ಲಿ 13 ಲಕ್ಷ ಮೌಲ್ಯದ ಪೌಡರ್ ಚಿನ್ನ ; ಥಾಣೆ ಮೂಲದ ಆರೋಪಿ ಸೆರೆ

19-03-21 09:00 pm       Mangaluru correspondent   ಕರಾವಳಿ

ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಯನ್ನು ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಮಂಗಳೂರು, ಮಾ.19 : ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಯನ್ನು ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ ನಗರದ ನಿವಾಸಿ ವಿನೇಶ್ ರಾಜು ಆಡ್ವಾಣಿ ಎಂಬಾತನನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಜೊತೆಗೆ ಈತನ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದೆ.

ಆರೋಪಿಯಿಂದ 284.900 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,16,238 ಎಂದು ಅಂದಾಜಿಸಲಾಗಿದೆ.

A passenger from Ushannagar who landed at Mangalore International Airport has an offence case registered under him for smuggling gold in powdered form mixed with solid gum which was then concealed in his rectum.