ಬ್ರೇಕಿಂಗ್ ನ್ಯೂಸ್
20-03-21 03:33 pm Mangalore Correspondent ಕರಾವಳಿ
ಮಂಗಳೂರು, ಮಾ.20: ಸೌದಿ ಅರೇಬಿಯಾದ ಮೆಕ್ಕಾ ನಗರದ ಝಹ್ರತುಲ್ ಕುದಾಯಿ ಏಷಿಯನ್ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಉಪ್ಪಳ ಮೂಲದ, ಮಂಗಳೂರು ಫಳ್ನೀರ್ ನಿವಾಸಿಯಾಗಿದ್ದ ಡಾ. ಎ.ಕೆ. ಖಾಸಿಮ್ (51) ಮೆಕ್ಕಾದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ರಾತ್ರಿ ಸೌದಿ ಸಮಯ ರಾತ್ರಿ 11 ಗಂಟೆಗೆ ಜೆದ್ದಾ ನಗರದಲ್ಲಿರುವ ಸಂಬಂಧಿಕರ ಜೊತೆಗೆ ಫೋನಲ್ಲಿ ಮಾತನಾಡಿದ್ದ ಖಾಸಿಮ್, ಶುಕ್ರವಾರ ಜುಮಾ ನಮಾಝ್ ಗೆ ಜಿದ್ದಾಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ ಶುಕ್ರವಾರ ಎಷ್ಟೇ ಫೋನ್ ಮಾಡಿದರೂ ಸ್ವೀಕರಿಸದೇ ಇದ್ದಾಗ ಸಂಶಯಗೊಂಡು ಮನೆಯ ಬಾಗಿಲು ಮುರಿದು ನೋಡಿದ್ದು ಡಾ. ಖಾಸಿಮ್ ಮೃತದೇಹ ಕಂಡುಬಂದಿತ್ತು. ಅವರು ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗಿನ ಮಧ್ಯೆ ಹೃದಯಾಘಾತದಿಂದ ನಿಧನರಾಗಿರಬಹುದೆಂದು ಸಂಶಯಿಸಲಾಗಿದೆ.
ಡಾ. ಎ.ಕೆ. ಖಾಸಿಮ್ ಮೂಲತಃ ವಿಟ್ಲ ಬಳಿಯ ಕನ್ಯಾನದ ಕಡೂರಿನವರು. ಅವರ ತಂದೆ ಅಬ್ದುಲ್ ಖಾದರ್ ಬಳಿಕ ಉಪ್ಪಳದ ಪೈವಳಿಕೆಯ ಅಟ್ಟೆಗೋಳಿಯಲ್ಲಿ ವಾಸಿಸುತ್ತಿದ್ದರು. ಡಾ.ಖಾಸಿಮ್ ಮೆಡಿಕಲ್ ಕಲಿತು ವೈದ್ಯರಾದ ಬಳಿಕ ಮಂಗಳೂರಿನ ಫಳ್ನೀರ್ ನಲ್ಲಿ ಕುಟುಂಬದೊಂದಿಗೆ ವಾಸ ಮಾಡುತ್ತಿದ್ದರು. ಒಂದು ವರ್ಷದ ಹಿಂದಷ್ಟೇ ಊರಿಗೆ ಬಂದು ಸೌದಿಗೆ ತೆರಳಿದ್ದರು. ಕಳೆದ 26 ವರ್ಷಗಳಿಂದ ಉಪ್ಪಳ, ಮಂಗಳೂರು, ಸೌದಿ ಅರೇಬಿಯಾದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು.

ಮಂಗಳೂರು ಕೆಎಂಸಿಯಲ್ಲಿ ಎಂಬಿಬಿಎಸ್ ಮುಗಿಸಿ ಎಮರ್ಜೆನ್ಸಿ ಹೆಲ್ತ್ ಕೋರ್ಸ್ ಮಾಡಿದ್ದರು. ವಿಟ್ಲದ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದ ಖಾಸಿಮ್, ಈಗಿನ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಜೊತೆಗೆ ಮಂಗಳೂರಿನಲ್ಲಿ ಸಹಪಾಠಿಯಾಗಿದ್ದರು.
ಸೌದಿಗೆ ಉದ್ಯೋಗಕ್ಕೆ ತೆರಳುವ ಮುನ್ನ ಉಪ್ಪಳದ ಕೈಕಂಬದಲ್ಲಿ ಸೊಸೈಟಿ ಆಸ್ಪತ್ರೆ ತೆರೆದು ಬಡರೋಗಿಗಳಿಗೆ ನೆರವಾಗುತ್ತಿದ್ದರು. ಮಂಗಳೂರಿನಲ್ಲಿ ಕೂಡ ಹಲವಾರು ಕಾರುಣ್ಯ ಯೋಜನೆಯಲ್ಲಿ ಸಕ್ರಿಯರಾಗಿದ್ದರು. ಕಳೆದ ಬಾರಿ ವಿಮಾನದಲ್ಲಿ ಬರುತ್ತಿದ್ದ ವೇಳೆ ಓರ್ವ ಮಹಿಳೆಗೆ ಹೃದಯಾಘಾತವಾಗಿದ್ದು ವಿಮಾನದಲ್ಲೇ ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ್ದು ದೊಡ್ಡ ಸುದ್ದಿಯಾಗಿತ್ತು.
Mangaloren doctor and social worker dr kasim dies in Mecca.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm