ಬ್ರೇಕಿಂಗ್ ನ್ಯೂಸ್
 
            
                        20-03-21 03:33 pm Mangalore Correspondent ಕರಾವಳಿ
 
            ಮಂಗಳೂರು, ಮಾ.20: ಸೌದಿ ಅರೇಬಿಯಾದ ಮೆಕ್ಕಾ ನಗರದ ಝಹ್ರತುಲ್ ಕುದಾಯಿ ಏಷಿಯನ್ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಉಪ್ಪಳ ಮೂಲದ, ಮಂಗಳೂರು ಫಳ್ನೀರ್ ನಿವಾಸಿಯಾಗಿದ್ದ ಡಾ. ಎ.ಕೆ. ಖಾಸಿಮ್ (51) ಮೆಕ್ಕಾದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ರಾತ್ರಿ ಸೌದಿ ಸಮಯ ರಾತ್ರಿ 11 ಗಂಟೆಗೆ ಜೆದ್ದಾ ನಗರದಲ್ಲಿರುವ ಸಂಬಂಧಿಕರ ಜೊತೆಗೆ ಫೋನಲ್ಲಿ ಮಾತನಾಡಿದ್ದ ಖಾಸಿಮ್, ಶುಕ್ರವಾರ ಜುಮಾ ನಮಾಝ್ ಗೆ ಜಿದ್ದಾಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ ಶುಕ್ರವಾರ ಎಷ್ಟೇ ಫೋನ್ ಮಾಡಿದರೂ ಸ್ವೀಕರಿಸದೇ ಇದ್ದಾಗ ಸಂಶಯಗೊಂಡು ಮನೆಯ ಬಾಗಿಲು ಮುರಿದು ನೋಡಿದ್ದು ಡಾ. ಖಾಸಿಮ್ ಮೃತದೇಹ ಕಂಡುಬಂದಿತ್ತು. ಅವರು ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗಿನ ಮಧ್ಯೆ ಹೃದಯಾಘಾತದಿಂದ ನಿಧನರಾಗಿರಬಹುದೆಂದು ಸಂಶಯಿಸಲಾಗಿದೆ.
ಡಾ. ಎ.ಕೆ. ಖಾಸಿಮ್ ಮೂಲತಃ ವಿಟ್ಲ ಬಳಿಯ ಕನ್ಯಾನದ ಕಡೂರಿನವರು. ಅವರ ತಂದೆ ಅಬ್ದುಲ್ ಖಾದರ್ ಬಳಿಕ ಉಪ್ಪಳದ ಪೈವಳಿಕೆಯ ಅಟ್ಟೆಗೋಳಿಯಲ್ಲಿ ವಾಸಿಸುತ್ತಿದ್ದರು. ಡಾ.ಖಾಸಿಮ್ ಮೆಡಿಕಲ್ ಕಲಿತು ವೈದ್ಯರಾದ ಬಳಿಕ ಮಂಗಳೂರಿನ ಫಳ್ನೀರ್ ನಲ್ಲಿ ಕುಟುಂಬದೊಂದಿಗೆ ವಾಸ ಮಾಡುತ್ತಿದ್ದರು. ಒಂದು ವರ್ಷದ ಹಿಂದಷ್ಟೇ ಊರಿಗೆ ಬಂದು ಸೌದಿಗೆ ತೆರಳಿದ್ದರು. ಕಳೆದ 26 ವರ್ಷಗಳಿಂದ ಉಪ್ಪಳ, ಮಂಗಳೂರು, ಸೌದಿ ಅರೇಬಿಯಾದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು.

ಮಂಗಳೂರು ಕೆಎಂಸಿಯಲ್ಲಿ ಎಂಬಿಬಿಎಸ್ ಮುಗಿಸಿ ಎಮರ್ಜೆನ್ಸಿ ಹೆಲ್ತ್ ಕೋರ್ಸ್ ಮಾಡಿದ್ದರು. ವಿಟ್ಲದ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದ ಖಾಸಿಮ್, ಈಗಿನ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಜೊತೆಗೆ ಮಂಗಳೂರಿನಲ್ಲಿ ಸಹಪಾಠಿಯಾಗಿದ್ದರು.
ಸೌದಿಗೆ ಉದ್ಯೋಗಕ್ಕೆ ತೆರಳುವ ಮುನ್ನ ಉಪ್ಪಳದ ಕೈಕಂಬದಲ್ಲಿ ಸೊಸೈಟಿ ಆಸ್ಪತ್ರೆ ತೆರೆದು ಬಡರೋಗಿಗಳಿಗೆ ನೆರವಾಗುತ್ತಿದ್ದರು. ಮಂಗಳೂರಿನಲ್ಲಿ ಕೂಡ ಹಲವಾರು ಕಾರುಣ್ಯ ಯೋಜನೆಯಲ್ಲಿ ಸಕ್ರಿಯರಾಗಿದ್ದರು. ಕಳೆದ ಬಾರಿ ವಿಮಾನದಲ್ಲಿ ಬರುತ್ತಿದ್ದ ವೇಳೆ ಓರ್ವ ಮಹಿಳೆಗೆ ಹೃದಯಾಘಾತವಾಗಿದ್ದು ವಿಮಾನದಲ್ಲೇ ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ್ದು ದೊಡ್ಡ ಸುದ್ದಿಯಾಗಿತ್ತು.
 
            
            
            Mangaloren doctor and social worker dr kasim dies in Mecca.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm