ಬ್ರೇಕಿಂಗ್ ನ್ಯೂಸ್
 
            
                        20-03-21 11:10 pm Mangaluru correspondent ಕರಾವಳಿ
 
            ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
 
            
            
            Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm