ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm