ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.
ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
28-04-24 09:39 pm
HK News Desk
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
Prajwal Revanna sex video leak case: ವಿಡಿಯೋ ಪ...
28-04-24 04:26 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
28-04-24 11:03 pm
Udupi Correspondent
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
28-04-24 09:46 pm
HK News Desk
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm