ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.
ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm