ಬ್ರೇಕಿಂಗ್ ನ್ಯೂಸ್
21-03-21 09:01 pm Mangaluru correspondent ಕರಾವಳಿ
ಮಂಗಳೂರು, ಮಾ.21 : ಬಿಜೆಪಿ ಶಾಸಕರ ಅಶ್ಲೀಲ ಸಿಡಿಯ ಬಗ್ಗೆ ಸಮಗ್ರ ತನಿಖೆ ಮಾಡಲು ಎಸ್ಐಟಿ ರಚಿಸಿದ ನಾಚಿಕೆಗೇಡು ಬಿಜೆಪಿ ಸರಕಾರಕ್ಕೆ ತನ್ನದೇ ಪಕ್ಷದ ಒಬ್ಬ ಕಾರ್ಯಕರ್ತನ ಭೀಕರ ಕೊಲೆಯ ಹಿಂದಿರುವ ಸತ್ಯವನ್ನು ಬಯಲಿಗೆಳೆಯಲು, ಸಮಗ್ರ ತನಿಖೆ ನಡೆಸಲು ಎಸ್ಐಟಿ ರಚಿಸಲು ಯಾಕೆ ಅಸಾಧ್ಯ..? ಎಂದು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ಪ್ರಕರಣಕ್ಕೆ ಐದು ವರುಷ ಸಂದ ಈ ದಿನದಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ನಡೆಸಿದ ಮೆರವಣೆಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅಕ್ರಮಗಳ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ ಕಾರಣಕ್ಕಾಗಿಯೇ ಕೊಲೆಗೀಡಾಗಿದ್ದಾರೆ. ಪೊಲೀಸ್ ಇಲಾಖೆ ಕೊಲೆಗಟುಕರನ್ನಷ್ಟೇ ಬಂಧಿಸಿದ್ದಾರೆ ಹೊರತು ಕೊಲೆಯ ಹಿಂದಿರುವ ಸೂತ್ರಧಾರಿಗಳನ್ನು ಬಂಧಿಸೋದಾಗಲಿ ಅಥವಾ ಪ್ರಕರಣವನ್ನು ಸಂಪೂರ್ಣ ಭೇದಿಸಲು ಈವರೆಗೂ ಸಾಧ್ಯವಾಗಿಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಹಾಗಾಗಿ ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ನೇಮಕ ಆಗಬೇಕು. ಅದು ಆಗುವವರೆಗೆ ಬಾಳಿಗಾ ಸಾವಿನ ನ್ಯಾಯಕ್ಕಾಗಿ ನಡೆಯುವ ಹೋರಾಟ ಎಂದೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಈ ವೇಳೆ ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಡಿಎಸ್ಎಸ್ ರಾಜ್ಯ ಮುಖಂಡರಾದ ಎಂ. ದೇವದಾಸ್, ಮನೋವೈದ್ಯ ಡಾ. ಪಿ.ವಿ. ಭಂಡಾರಿ , ಮಂಜುಳಾ ನಾಯಕ್, ಮಾಜಿ ಕಾರ್ಪೊರೇಟರ್ ಪ್ರಕಾಶ್ ಸಾಲ್ಯಾನ್, ಸುನಿಲ್ ಬಜಿಲಕೇರಿ, ಸುಧಾಕರ ಶೆಣೈ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಮುಖಂಡರಾದ ರಘು ಎಕ್ಕಾರ್, ಜೆರಾಲ್ಡ್ ಟವರ್, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಪ್ರಸಾದ್ ಬಜಿಲಕೇರಿ, ಡಾ. ಕೃಷ್ಣಪ್ಪ ಕೊಂಚಾಡಿ, ಗುಲಾಬಿ ಬಿಳಿಮಲೆ, ಆಶಾ ನಾಯಕ್, ಎರಿಕ್ ಲೋಬೋ, ಶ್ಯಾಮ್ ಸುಂದರ್ ರಾವ್, ವಾಸುದೇವ ಉಚ್ಚಿಲ, ಪ್ರಭಾಕರ ಕಾಪಿಕಾಡ್, ಬಾಳಿಗಾ ಅವರ ಸಹೋದರಿ ಅನುರಾಧ ಬಾಳಿಗ, ಹರ್ಷ ಬಾಳಿಗ ಉಪಸ್ಥಿತರಿದ್ದರು.

ಸಭೆಯನ್ನು ದೇಶಪ್ರೇಮಿ ಸಂಘಟನೆಗಳ ಸಂಚಾಲಕ ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಸ್ವಾಗತಿಸಿ ನಿರ್ವಹಿಸಿದರು. ವೆಂಕಟರಮಣ ದೇವಳದ ಮುಂಭಾಗದಲ್ಲಿ ಬಾಳಿಗಾ ಸಹೋದರಿಯರು ಪ್ರಾರ್ಥಿಸುವ ಮೂಲಕ ಮೆರವಣಿಗೆ ಪ್ರಾರಂಭಗೊಂಡು ಬಾಳಿಗ ಮನೆ ವರೆಗೆ ನಡೆಯಿತು.
SIT probe should be initiated in connection to the Murder of Vinayak Baliga said Professor Narendra Nayak during the mark the 5th death anniversary of the RTI activist in Mangalore.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm