ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.


ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.


ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.

ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm