ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.


ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.


ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.

ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm