ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.
ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.
ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am