ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.


ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.


ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.

ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm