ಬ್ರೇಕಿಂಗ್ ನ್ಯೂಸ್
22-03-21 05:09 pm Mangalore Correspondent ಕರಾವಳಿ
ಮಂಗಳೂರು, ಮಾ.22:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ವತಃ ಫೀಲ್ಡಿಗೆ ಇಳಿದಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಂಗಳೂರು ನಗರದ ಜನರಿಗೆ ಅರಿವು ಮೂಡಿಸಲು ದಂಡ ಎತ್ತಿದ್ದಾರೆ. ಸಾರ್ವಜನಿಕ ಜಾಗಗಳು, ಬಸ್ ಇನ್ನಿತರ ಸಾರಿಗೆ ವಾಹನಗಳು, ಮಾಲ್ ಗಳಿಗೆ ತೆರಳಿ ಕೊರೊನಾ ಎಚ್ಚರಿಕೆಯ ಛಾಟಿ ಬೀಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಯ ಪ್ರಮುಖ ಇಲಾಖೆಯ ಅಧಿಕಾರಿಗಳು ದಿನದಲ್ಲಿ ಒಂದು ಗಂಟೆ ಕಾಲ ಫೀಲ್ಡಿಗೆ ಇಳಿಯಬೇಕು ಎಂದು ಜಿಲ್ಲಾಧಿಕಾರಿಗಳು ಕಳೆದ ವಾರ ಸೂಚನೆ ನೀಡಿದ್ದರು. ಹೊಸ ರೀತಿಯ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳೇ ಚಾಲನೆ ನೀಡಿದ್ದು ದಿಢೀರ್ ಆಗಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿ ನಡೆಯುತ್ತಾ ಹೋಗಿದ್ದಾರೆ. ಇವರ ಕಾರ್ಯಾಚರಣೆಗೆ ಡಿಸಿಪಿ ಹರಿರಾಮ್ ಶಂಕರ್ ಸಾಥ್ ನೀಡಿದ್ದಾರೆ.

ಅಂಗಡಿಗಳಲ್ಲಿ ವ್ಯಾಪಾರಸ್ಥರು ಮಾಸ್ಕ್ ಹಾಕಿದ್ದಾರೆಯೇ ಎಂದು ಗಮನಿಸುತ್ತಾ ರಸ್ತೆಯಲ್ಲಿ ಮಾಸ್ಕ್ ಇಲ್ಲದೆ ಎದುರಿಗೆ ಸಿಕ್ಕವರಿಗೆ ಗದರುತ್ತಾ ಸಾಗಿದ್ದಾರೆ. ಯಾಕಪ್ಪಾ ಮಾಸ್ಕ್ ಹಾಕಿಲ್ಲಾ.. ಕೊರೊನಾ ಇರೋದು ಗೊತ್ತಿಲ್ವಾ.. ಎಂದು ಗದರಿದ್ದಾರೆ. ಬಳಿಕ ಸಿಟಿ ಸೆಂಟರ್ ಮಾಲ್ ಗೆ ತೆರಳಿದ ಜಿಲ್ಲಾಧಿಕಾರಿಗಳು ಅಲ್ಲಿ ಸಿಬಂದಿಯೇ ಮಾಸ್ಕ್ ಹಾಕಿರದೇ ಇದ್ದುದನ್ನು ಗಮನಿಸಿ, ಶಟರ್ ಎಳೆದು ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಸಾರಿಗೆ ಬಸ್ಸಿಗೂ ಏರಿಹೋದ ಜಿಲ್ಲಾಧಿಕಾರಿ, ಮಾಸ್ಕನ್ನು ಗಲ್ಲಕ್ಕೆ ತಗಲಿಸಿಕೊಂಡಿದ್ದ ಪ್ರಯಾಣಿಕರನ್ನು ಗದರಿಸಿದ್ದಾರೆ. ಮೊದಲ ದಿನವಾಗಿದ್ದರಿಂದ ಫೈನ್ ಹಾಕೋದಿಲ್ಲ. ಬಸ್ಸಿನಲ್ಲಿ ಪ್ರಯಾಣಿಕರು ಮಾಸ್ಕ್ ಹಾಕಿಲ್ಲಾಂದ್ರೆ ಕಂಡಕ್ಟರ್ ಮತ್ತು ಚಾಲಕನಿಗೆ ದಂಡ ವಿಧಿಸುವುದಾಗಿ ಹೇಳಿದ್ದಾರೆ.

ಜಿಲ್ಲಾಧಿಕಾರಿ ರಸ್ತೆಯುದ್ದಕ್ಕೂ ನಡೆದು ಹೋಗುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರೆ, ಹಿಂದಿನಿಂದ ಮಾಧ್ಯಮದ ಕ್ಯಾಮರಾಗಳು, ಪೊಲೀಸರು ಮತ್ತು ಇತರೇ ಇಲಾಖೆಯ ಅಧಿಕಾರಿಗಳು ಓಡುತ್ತಿದ್ದರು. ಜಿಲ್ಲಾಧಿಕಾರಿಗಳ ಚುರುಕಿನ ನಡೆಗೆ ಪೊಲೀಸರು ಮತ್ತು ಇತರೇ ಅಧಿಕಾರಿಗಳು ಸುಸ್ತಾಗಿದ್ದರು. ಜನರಿಗೆ ಎಷ್ಟು ಹೇಳಿದರೂ, ಅಷ್ಟೇ. ಮಾಸ್ಕ್, ಅಂತರ ಕಾಪಾಡಬೇಕು ಎಂದ್ರೆ ಕೇಳಲ್ಲ. ಇದಕ್ಕಾಗಿ ವ್ಯಾಪಾರಸ್ಥರು ಮತ್ತು ಮಾಲ್ ಗಳೇ ಜನರನ್ನು ನೋಡಿಕೊಳ್ಳಬೇಕು. ಅದಕ್ಕಾಗಿ ಅಧಿಕಾರಿಗಳು ಫೀಲ್ಡಿಗೆ ಇಳಿದು ಬಿಸಿ ಮುಟ್ಟಿಸಬೇಕು ಎಂಬ ಪ್ಲಾನ್ ಜಿಲ್ಲಾಧಿಕಾರಿಗಳದ್ದು.
Video:
DC Rajendra Kumar along with DCP Hariram Shankar visited public places like Malls, Bus stands and other places to aware people of coronavirus in Mangalore.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm