ಬ್ರೇಕಿಂಗ್ ನ್ಯೂಸ್
21-08-20 02:05 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 21: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ದೇಶ - ವಿದೇಶದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಆದಿತ್ಯ ರಾವ್ ಈತನಿಗೂ ರೋಲ್ ಮಾಡೆಲ್ ಆಗಿದ್ನಂತೆ. ಅದೇ ಕಾರಣಕ್ಕೆ ಆತ ಮಂಗಳೂರು ಏರ್ಪೋರ್ಟಿಗೆ ಬಾಂಬ್ ಇಟ್ಟಿರುವುದಾಗಿ ಹೇಳಿ ಈಗ ಜೈಲು ಕಂಬಿ ಎಣಿಸಿದ್ದಾನೆ. ಹೌದು.. ಎರಡು ದಿನಗಳ ಹಿಂದೆ ಏರ್ಪೋರ್ಟಿಗೆ ಬಾಂಬ್ ಕರೆ ಮಾಡಿ ಸಿಕ್ಕಿಬಿದ್ದ ಕಾರ್ಕಳದ ವಸಂತ ಶೇರಿಗಾರ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ, ಪೊಲೀಸರಿಗೇ ಅಚ್ಚರಿಯಾಗಿತ್ತು.
ಆರೋಪಿ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಟಿ ಕರೆದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್, ವಸಂತ ಶೇರಿಗಾರನ ಬಗ್ಗೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿವಾಸಿ ವಸಂತ್ ಶೇರಿಗಾರ (33) ಎಂಬವನನ್ನು ಬಂಧಿಸಿದ್ದು ಆದಿತ್ಯ ರಾವ್ ರೀತಿಯಲ್ಲಿ ಪ್ರಚಾರ ಗಿಟ್ಟಿಸುವುದಕ್ಕಾಗಿ ಬಾಂಬ್ ಇಟ್ಟಿದ್ದಾಗಿ ಹುಸಿ ಕರೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ಆಗಸ್ಟ್ 19ರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ಬಜ್ಪೆ ಏರ್ಪೋರ್ಟ್ ಗೆ ಬಾಂಬ್ ಇಟ್ಟಿದ್ದಾಗಿ ಹೇಳಿದ್ದ. ಅವರು ಕೂಡಲೇ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇದರಿಂದ ಗಾಬರಿಗೊಂಡ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ತಿಳಿಸಿದ್ದು ತಪಾಸಣೆ ಏರ್ಪಡಿಸಿದ್ದರು. ಇದೇ ವೇಳೆ, ಆರೋಪಿಯ ನಂಬರ್ ಟ್ರೇಸ್ ಮಾಡಿದ್ದು ಕಾರ್ಕಳದ ವಸಂತಕೃಷ್ಣ ಶೇರಿಗಾರ್ ಎಂದು ತೋರಿಸಿತ್ತು. ವಿಮಾನ ನಿಲ್ದಾಣ ಆಸುಪಾಸಿನಲ್ಲಿ ತಪಾಸಣೆ ನಡೆಸಿದಾಗ ಬಾಂಬ್ ಕರೆ ಹುಸಿಯೆಂದು ತಿಳಿದುಬಂದಿತ್ತು. ಅಲ್ಲದೆ, ಮಂಗಳೂರು ಪೊಲೀಸರು ನೇರವಾಗಿ ಕಾರ್ಕಳಕ್ಕೆ ತೆರಳಿ, ಸದ್ದಿಲ್ಲದ ಹಾಗೆ ಆರೋಪಿಯನ್ನು ಎತ್ತಾಕ್ಕೊಂಡು ಬಂದಿದ್ದಾರೆ. ವಿಚಾರಣೆ ನಡೆಸಿದಾಗ ಬಾಂಬ್ ಕರೆಯ ನಿಜ ವಿಚಾರ ಬಯಲಾಗಿದೆ.
ಎಂಟನೇ ತರಗತಿ ಓದಿದ್ದ ವಸಂತ, ಬೆಂಗಳೂರಿನಲ್ಲಿ ಹೊಟೇಲಿನಲ್ಲಿ ಕೆಲಸಕ್ಕಿದ್ದ. ಲಾಕ್ ಡೌನ್ ಬಳಿಕ ಊರಿಗೆ ಬಂದಿದ್ದು ಮೊಬೈಲ್ ನಲ್ಲಿ ಹೆಚ್ಚು ಆಕ್ಟೀವ್ ಆಗಿದ್ದ. ಮನೆಯಲ್ಲಿ ಗದ್ದೆ ಕೆಲಸವನ್ನೂ ಮಾಡ್ತಿದ್ದ. ಇದೇ ವೇಳೆ ಗೂಗಲ್ನಲ್ಲಿ ಮಂಗಳೂರು ಏರ್ ಪೋರ್ಟ್ ಬಗ್ಗೆ ಸರ್ಚ್ ಮಾಡಿದಾಗ, ಮಾಜಿ ನಿರ್ದೇಶಕ ವಾಸುದೇವ ರಾವ್ ನಂಬರ್ ಸಿಕ್ಕಿತ್ತು. ಫೋನ್ ಕರೆ ಮಾಡಿ, ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಕಳೆದ ಜನವರಿ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇರಿಸಿ ಬಂಧಿತನಾಗಿದ್ದ ಆದಿತ್ಯ ರಾವ್ ಒಂದೇ ದಿನ ರಾತ್ರಿ ಬೆಳಗಾಗುವುದರಲ್ಲಿ ದೇಶ - ವಿದೇಶದಲ್ಲಿ ಪ್ರಚಾರ ಪಡೆದಿದ್ದ. ಅದೇ ಪ್ರಕರಣದ ಬೆನ್ನು ಹತ್ತಿದ ವಸಂತ, ಆದಿತ್ಯನ ರೀತಿಯಲ್ಲಿ ದೇಶಾದ್ಯಂತ ಪ್ರಚಾರ ಗಿಟ್ಟಿಸಬೇಕೆಂದು ಈ ಕೆಲಸ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಸಂತ್ ವಿರುದ್ಧ ಗಂಭೀರ ಕಾಯ್ದೆಗಳಡಿ ಪ್ರಕರಣ ದಾಖಲಿಸಿದ್ದೇವೆ. ಆತನ ಮಾನಸಿಕ ಆರೋಗ್ಯದ ಬಗ್ಗೆ ಮೆಡಿಕಲ್ ರಿಪೋರ್ಟ್ ಬರಬೇಕು. ಇದೊಂದು ಗಂಭೀರ ಪ್ರಕರಣವಾಗಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm