ಬ್ರೇಕಿಂಗ್ ನ್ಯೂಸ್
24-03-21 08:18 pm Mangaluru correspondent ಕರಾವಳಿ
ಮಂಗಳೂರು, ಮಾ.24 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಘಟಕದ ವತಿಯಿಂದ ಭಗತ್ ಸಿಂಗ್, ರಾಜಗುರು, ಸುಖದೇವ್ ಇವರ ಬಲಿದಾನ ದಿನದ ಸ್ಮರಣೆಯಾಗಿ ಸಾರ್ವಜನಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರಾಗಿದ್ದ ದಿಶಾ ಭಾರತ ಇದರ ಟ್ರಸ್ಟಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪದ್ಮಾರ್, ಭಾರತೀಯತೆಯನ್ನು ಉಳಿಸಲು ಪ್ರಯತ್ನಿಸಿದ ಸಾವಿರಾರು ಬಲಿದಾನಿಗಳು ಈ ಪುಣ್ಯಭೂಮಿಯಲ್ಲಿ ಆಗಿಹೋಗಿದ್ದಾರೆ. ತ್ಯಾಗ, ಬಲಿದಾನ ಮತ್ತು ಸೇವೆ ಭಾರತದ ಪರಂಪರೆಯಲ್ಲಿ ಅಡಕವಾಗಿದ್ದು ಇದನ್ನು ಯುವ ಸಮುದಾಯ ಮುಂದುವರಿಸುವ ಅಗತ್ಯತೆ ಇದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ನಿವೃತ್ತ ಪೊಲೀಸ್ ಅಧೀಕ್ಷಕರಾದ ಪಿ ಹರಿಶ್ಚಂದ್ರ ಆಗಮಿಸಿ , ಬಲಿದಾನಿಗಳ ಆದರ್ಶಗಳನ್ನು ಯುವ ಜನತೆ ಜೀವನದಲ್ಲಿ ಮೈಗೂಡಿಸಬೇಕು ಎಂದು ಹೇಳಿದರು. ಅ ಭಾ ವಿ ಪ ಮಂಗಳೂರು ಮಹಾನಗರದ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಭು ಹಾಗೂ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಾರ್ವಜನಿಕ ಸಭೆಯ ಮೊದಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನೃತ್ಯ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುಮಂಗಲಾ ರಾವ್, ಹಿರಿಯ ಕಾರ್ಯಕರ್ತರಾದ ಚ.ನ ಶಂಕರರಾವ್, ಸರಸ್ವತಿ ರಾವ್, ರಾಘವೇಂದ್ರ ಹೊಳ್ಳ, ಉದ್ಯಮಿ ಸಂಜಯ್ ಪ್ರಭು, ಸುಜಿತ್ ಪ್ರತಾಪ್, ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರ್, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಸಹ ಕಾರ್ಯದರ್ಶಿಗಳಾದ ಶ್ರೇಯಸ್ ರೈ, ಕಿರಣ್, ಆತ್ಮಿಕ, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ ಮಠದಮೂಲೆ, ಕಾರ್ಯಕರ್ತರಾದ ಆದಿತ್ಯ ಶೆಟ್ಟಿ, ಆದರ್ಶ್ ಉಪ್ಪಾರ, ಪ್ರಣಮ್ ಶೆಟ್ಟಿ, ಭವನೀಶ್ ಶೆಟ್ಟಿ ಹಾಗೂ ಅನೇಕ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Martyr's Day 2021 Bhagat Singh death anniversary program was held by ABVP in Mangalore
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm