ಬ್ರೇಕಿಂಗ್ ನ್ಯೂಸ್
24-03-21 08:18 pm Mangaluru correspondent ಕರಾವಳಿ
ಮಂಗಳೂರು, ಮಾ.24 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಘಟಕದ ವತಿಯಿಂದ ಭಗತ್ ಸಿಂಗ್, ರಾಜಗುರು, ಸುಖದೇವ್ ಇವರ ಬಲಿದಾನ ದಿನದ ಸ್ಮರಣೆಯಾಗಿ ಸಾರ್ವಜನಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರಾಗಿದ್ದ ದಿಶಾ ಭಾರತ ಇದರ ಟ್ರಸ್ಟಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪದ್ಮಾರ್, ಭಾರತೀಯತೆಯನ್ನು ಉಳಿಸಲು ಪ್ರಯತ್ನಿಸಿದ ಸಾವಿರಾರು ಬಲಿದಾನಿಗಳು ಈ ಪುಣ್ಯಭೂಮಿಯಲ್ಲಿ ಆಗಿಹೋಗಿದ್ದಾರೆ. ತ್ಯಾಗ, ಬಲಿದಾನ ಮತ್ತು ಸೇವೆ ಭಾರತದ ಪರಂಪರೆಯಲ್ಲಿ ಅಡಕವಾಗಿದ್ದು ಇದನ್ನು ಯುವ ಸಮುದಾಯ ಮುಂದುವರಿಸುವ ಅಗತ್ಯತೆ ಇದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ನಿವೃತ್ತ ಪೊಲೀಸ್ ಅಧೀಕ್ಷಕರಾದ ಪಿ ಹರಿಶ್ಚಂದ್ರ ಆಗಮಿಸಿ , ಬಲಿದಾನಿಗಳ ಆದರ್ಶಗಳನ್ನು ಯುವ ಜನತೆ ಜೀವನದಲ್ಲಿ ಮೈಗೂಡಿಸಬೇಕು ಎಂದು ಹೇಳಿದರು. ಅ ಭಾ ವಿ ಪ ಮಂಗಳೂರು ಮಹಾನಗರದ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಭು ಹಾಗೂ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಾರ್ವಜನಿಕ ಸಭೆಯ ಮೊದಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನೃತ್ಯ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುಮಂಗಲಾ ರಾವ್, ಹಿರಿಯ ಕಾರ್ಯಕರ್ತರಾದ ಚ.ನ ಶಂಕರರಾವ್, ಸರಸ್ವತಿ ರಾವ್, ರಾಘವೇಂದ್ರ ಹೊಳ್ಳ, ಉದ್ಯಮಿ ಸಂಜಯ್ ಪ್ರಭು, ಸುಜಿತ್ ಪ್ರತಾಪ್, ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರ್, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಸಹ ಕಾರ್ಯದರ್ಶಿಗಳಾದ ಶ್ರೇಯಸ್ ರೈ, ಕಿರಣ್, ಆತ್ಮಿಕ, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ ಮಠದಮೂಲೆ, ಕಾರ್ಯಕರ್ತರಾದ ಆದಿತ್ಯ ಶೆಟ್ಟಿ, ಆದರ್ಶ್ ಉಪ್ಪಾರ, ಪ್ರಣಮ್ ಶೆಟ್ಟಿ, ಭವನೀಶ್ ಶೆಟ್ಟಿ ಹಾಗೂ ಅನೇಕ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Martyr's Day 2021 Bhagat Singh death anniversary program was held by ABVP in Mangalore
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm