ಬ್ರೇಕಿಂಗ್ ನ್ಯೂಸ್
25-03-21 09:33 am Mangaluru Correspondent ಕರಾವಳಿ
ಉಪ್ಪಿನಂಗಡಿ, ಮಾ.25: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಲ್ಲಿನ ನೆಲ್ಯಾಡಿ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಬೆಂಕಿ ಹತ್ತಿಕೊಂಡಿದ್ದು ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಮೆ ಒಮ್ಮೆಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಗಾಯಗೊಂಡು ಹೊರಬರಲಾಗದೆ ಸಜೀವ ದಹನವಾದರೆ, ಬಸ್ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ.


ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಮೋಟರ್ಸ್ ಬಸ್ ಎನ್ನಲಾಗುತ್ತಿದ್ದು, ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಂಟೈನರ್ಗೆ ಗ್ಯಾಸ್ ಬಳಕೆ ಮಾಡುತ್ತಿದ್ದು, ಅಪಘಾತದ ಬಳಿಕ ಗ್ಯಾಸ್ ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಮತ್ತು ಕಂಟೇನರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಸ್ಥಳದಲ್ಲಿ ಅಪಘಾತದ ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.
Video:
In a tragic accident between Van and Private Bus, Truck Driver got burnt alive and the bus was completely gutted by fire at Nellyadi, Sullia in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm