ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
21-11-25 02:26 pm
HK News Desk
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm