ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.
ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.
ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm